ಕಂದಾಯ ಸಚಿವ‌ ಕೃಷ್ಣ ಬೈರೇಗೌಡರಿಂದ ದಿಢೀರ ತಹಶೀಲ್ದಾರ ಕಚೇರಿಗೆ ಭೇಟಿ

ಕಲಬುರಗಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಬೆಳಿಗ್ಗೆ ಬೆಂಗಳೂರಿನಂದ ಕಲಬುರಗಿಗೆ ಆಗಮಿಸುತ್ತಿದ್ದಂತೆ ನೇರವಾಗಿ ಕಲಬುರಗಿ ತಹಶೀಲ್ದಾರ ಕಚೇರಿಗೆ ದಿಢೀರ ಭೇಟಿ ನೀಡಿ ಕಚೇರಿಯಲ್ಲಿ ಸಿಬ್ಬಂದಿ ಕಾರ್ಯನಿರ್ವಹಣೆ ವೀಕ್ಷಿಸಿದಲ್ಲದೆ ಸಾರ್ವಜನಿಕ ಅಹವಾಲು ಆಲಿಸಿದರು.

ಸಚಿವರು ಟಪಾಲ್ ಶಾಖೆ, ಪಿಂಚಣಿ ಶಾಖೆ, ರೆಕಾರ್ಡ್ ರೂಂ ಗಳಿಗೆ ಭೇಟಿ ನೀಡಿ ಸಿಬ್ಬಂದಿಗಳ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಿದರು.

ಟಪಾಲ್ ಶಾಖೆಗೆ ಭೇಟಿ ನೀಡಿದಾಗ ಇ-ಕಚೇರಿ ಕಾರ್ಯನಿರ್ವಹಣೆ ಕುರಿತು ಸಿಬ್ಬಂದಿಯನ್ನು ವಿಚಾರಿಸಿದರು. ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರ ಪತ್ರಗಳು ವಿಷಯ ನಿರ್ವಾಹಕರಿಗೆ ಕಳುಹಿಸಲು 4-5 ದಿನಗಳಾಗುತ್ತಿವೆ ಎಂದು ಡಾಟಾ ಎಂಟ್ರಿ ಅಪರೇಟರ್ ಉತ್ತರ ನೀಡಿದಾಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ತಾವು ಇ-ಕಚೇರಿಯಲ್ಲಿ ಕಡತ ವಿಲೇವಾರಿ ಮಾಡುತ್ತಿದ್ದು, ಅನಗತ್ಯ ಸರ್ವರ್ ಸಮಸ್ಯೆ ಹೇಳಿ ಜನರನ್ನು ಸತಾಯಿಸದಿರಿ ಎಂದು ಹೇಳಿದಲ್ಲದೆ ಇದನ್ನು ಖುದ್ದಾಗಿ ಪರಿಶೀಲಿಸಬೇಕೆಂದು ತಹಶೀಲ್ದಾರ ನಾಗಮ್ಮ ಕಟ್ಟಿಮನಿಗೆ ಅವರಿಗೆ ಖಡಕ್ ಸೂಚನೆ ನೀಡಿದರು.

ರೆಕಾರ್ಡ್ ರೂಂ‌ ಭೇಟಿ ಸಂದರ್ಭದಲ್ಲಿ ಕೈಬರಹ ಪಹಾಣಿ, ಖಾಸ್ರಾ ಪಾಣಿ ಸೇರಿದಂತೆ ಇತರೆ ದಾಖಲೆಗಳ ಸಂರಕ್ಷಣಾ ಕ್ರಮಗಳ ಕುರಿತು ಸಿಬ್ಬಂದಿಗಳಿಂದ ಮಾಹಿತಿ ಪಡೆದರು.

ಕಂದಾಯ ಆಯುಕ್ತ ಸುನೀಲ ಕುಮಾರ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಎ.ಸಿ. ಆಶಪ್ಪ ಪೂಜಾರಿ ಮತ್ತಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420