ಬಿಸಿ ಬಿಸಿ ಸುದ್ದಿ

ಮಾನವೀಯತೆಯೊಂದಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿರುವ ಮಣೂರ್ ಆಸ್ಪತ್ರೆಯ ಸೇವೆ ಅನನ್ಯ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಗುಣಮಟ್ಟದ ಚಿಕಿತ್ಸೆಯನ್ನು ಮಾನವೀಯತೆಯ ಸ್ಪರ್ಷದ ಮೂಲಕ ನೀಡುತ್ತಾ ರೋಗಿಗಳ ಸೇವೆ ಮಾಡುತ್ತಿರುವ ಮಣೂರ್ ಆಸ್ಪತ್ರೆಯ ಸೇವೆ ಅನನ್ಯವಾದುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ರಿಂಗ್ ರಸ್ತೆಯಲ್ಲಿರುವ ಮಣೂರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಾಲ್ಕನೆಯ ವರ್ಷದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಬಸವಣ್ಣನವರ ತತ್ವ ಅಳವಡಿಸಿಕೊಂಡು ವೈದ್ಯರಾಗಿ ರೋಗಿಗಳ ಸೇವೆ ಮಾಡುತ್ತಿರುವ ಡಾ ಫಾರೂಕ್ ಮಣೂರ್ ಅವರು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಅಭ್ಯರ್ಥಿಗಳಿಗೆ ಪುಸ್ತಕ ಒದಗಿಸುವ ಮೂಲಕ ಮೇಲ್ಪಂಕ್ತಿಯನ್ನು ಹಾಕಿದ್ದಾರೆ, ಜೊತೆಗೆ ಸ್ಪರ್ಧಾಳುವಿಗೆ ಪ್ರೋತ್ಸಾಹ ಧನ ನೀಡುವ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡಿರಿವ ಶ್ಲಾಘನೀಯ ಎಂದು ಕೊಂಡಾಡಿದರು.

ಕಲಬುರಗಿ ನಗರದಲ್ಲಿ ಮಹಿಳೆರಿಗಾಗಿ ಒಳಾಂಗಣ ಕ್ರೀಡಾಂಗಣ ಹಾಗೂ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ಇದರಿಂದ ಈ ಭಾಗದ ಯುವಕ ಯುವತಿಯರಿಗೆ ಶೈಕ್ಷಣಿಕ ವಾಗಿ ಹಾಗೂ ಕ್ರೀಡಾತ್ಮಕವಾಗಿ ಅನುಕೂಲವಾಗಲಿದೆ ಎಂದರು.

ಇದಕ್ಕೂ ಮುನ್ನ ಆಸ್ಪತ್ರೆಯ ಮ್ಯಾನೆಜಿಂಗ್ ಡೈರೆಕ್ಟರ್ ಡಾ ಫಾರೂಕ್ ಮಣೂರು ಮಾತನಾಡಿ ಮಣೂರು ಆಸ್ಪತ್ರೆ ಈಗ ನಾಲ್ಕನೆಯ ವರ್ಷಕ್ಕೆ ಕಾಲಿಡುತ್ತಿದೆ. ಬಡವರ ಹಾಗೂ ಮಧ್ಯಮ ವರ್ಗದವರಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಸ್ಥಾಪಿಸಲಾದ ಈ ಆಸ್ಪತ್ರೆಯ ಯಶಸ್ಸಿನ ಹಿಂದೆ ನಮ್ಮ ಸಿಬ್ಬಂದಿ ವರ್ಗದ ಹಾಗೂ ವೈದ್ಯರ ಪರಿಶ್ರಮವಿದೆ ಎಂದರು.

ಸಚಿವರಿಂದ ಪ್ರೇರಣೆ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಕನಿಷ್ಠ 50 ಅಭ್ಯರ್ಥಿಗಳಿಗೆ ಪುಸ್ತಕ ಒದಗಿಸಿದ್ದೇವೆ.‌‌ಇದರ ಜೊತೆಗೆ ಮಣೂರು ಆಸ್ಪತ್ರೆ ಸಾಮಾಜಿಕ‌ ಕಾರ್ಯದಲ್ಲಿ ತೊಡಗಿದ್ದು ಇದೂವರೆಗೆ 33 ಟಿಬಿ ಯಿಂದ ಬಳಲುತ್ತಿರುವರಿಗೆ ದತ್ತು ತೆಗೆದುಕೊಂಡು ಉಚಿತ ಚಿಕಿತ್ಸೆ ನೀಡಲಾಗಿದೆ. ಇನ್ನೂ ಸಮಾಜ ಸೇವೆ ಮಾಡಲು ಆಸ್ಪತ್ರೆ ಸದಾ ಸಿದ್ದವಾಗಿದೆ ಎಂದು ಅವರು ಹೇಳಿದರು.

ಸುಭಾಷ್ ರಾಠೋಡ ಮಾತನಾಡಿ ಆರೋಗ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ದಿಯಾದರೆ ಸಮಗ್ರ ಅಭಿವೃದ್ದಿಗೆ ಸಹಕಾರಿಯಾಗಲಿದೆ. ಸಮಾಜ ಸೇವೆಯ ಉದ್ದೇಶ ಹೊಂದಿರುವ ಡಾ ಫಾರೂಕ್ ಮಣೂರು ಅವರು ಚಿಂಚೋಳಿ ಕ್ಷೇತ್ರದಲ್ಲಿ ಪ್ರತಿವಾರ ಉಚಿತ ಆರೋಗ್ಯ ಶಿಬಿರ ನಡೆಸುತ್ತಿದ್ದಾರೆ. ಇದು ನಮ್ಮ ಭಾಗದ ಬಡ ಜನರಿಗೆ ಅನುಕೂಲವಾಗಿದೆ ಎಂದರು.

ಇದೇ ಸಂದರ್ಭದ 16 ವರ್ಷ ಒಳಗಿನ ಟೆನ್ನಿಸ್ ನಲ್ಲಿ ರಾಷ್ಟ್ರ ಮಟ್ಟದ ಸಾಧನೆ ಮಾಡಿದ ರಘು ಎನ್ನುವ ಸ್ಪರ್ಧಾಳುವಿಗೆ ರೂ 1.20 ಲಕ್ಷ ಮೊತ್ತದ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.

ಮಣೂರ್ ಆಸ್ಪತ್ರೆಯ ಕುರಿತಂತೆ ದಿ ವೆಲ್ ನೆಸ್ ರೆವೋಲುಷನ್ ‘ ಎನ್ನುವ ಮ್ಯಾಗ್ ಜಿನ್ ನ್ನು ಸಚಿವರು ಬಿಡುಗಡೆ ಮಾಡಿದರು.

ವೇದಿಕೆಯ ಮೇಲೆ ಶಾಸಕರಾದ ಕನೀಜ್ ಫಾತೀಮಾ, ಸುಭಾಷ್ ರಾಠೋಡ, ಅರವಿಂದ ಚೌವಾಣ್, ಕಿರಣ್ ದೇಶಮುಖ್, ಮುಬೀನ್, ಮಜರ್ ಹುಸೇನ್, ಅಜ್ಮಲ್ ಗೋಲಾ, ಫರಾಜುಲ್ ಇಸ್ಲಾಮ್, ಶಂಶೀರ್ ಸೇರಿದಂತೆ ಹಲವರಿದ್ದರು.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

43 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago