ಕಲಬುರಗಿ: ಕಲ್ಯಾಣ ಕರ್ನಾಟಕ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಚಾರಿಟೇಬಲ ಟ್ರಸ್ಟ್ ಉದ್ಘಾಟನಾ ಸಮಾರಂಭ ಇಲ್ಲಿನ ಜಗತ ವೃತದ ಆಮಂತ್ರಣ ಹೋಟೆಲನಲ್ಲಿ ನಡೆಯಿತು.
ದಿವ್ಯ ಸಾನಿಧ್ಯವನ್ನು ವಹಿಸಿಕೊಂಡ ಗದಗ ಬಸಯ್ಯ ಶಾಸ್ತ್ರಿಗಳು ಮಾತನಾಡಿ, ಅಂಧರು, ಅನಾಥರಿಗೆ ಸಂಗೀತ ಕಲಿಸಿ ವಿದ್ಯೆ, ಅನ್ನದಾನ ಮಾಡಿ, ವಸತಿ ನೀಡಿ ಸರ್ವರ ಬಾಳಿಗೆ ಬೆಳಕಾಗಬೇಕು.ಕಲ್ಯಾಣ ಕರ್ನಾಟಕ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಹೆಸರಿನ ಟ್ರಸ್ಟ್ ಉತ್ತಮವಾಗಿ ಬೆಳೆಯಲಿ’ ಎಂದು ಆಶಿಸಿದರು.
ಉತ್ತಮ ಸದುದ್ದೇಶದಿಂದ ಟ್ರಸ್ಟ್ ಆರಂಭಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಪದಾಧಿಕಾರಿಗಳು ನಿರಂತರವಾಗಿ ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮಹಿಳೆಯರು, ಯುವಜನರು ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಮಾಜ ಸೇವಕರಾದ ಶಾಂತಕುಮಾರ ಬಿರಾದಾರ ಉದ್ಘಾಟಿಸಿರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಜಪ ಮುಖಂಡ ಅಂಬರಾಯ ಬೆಳಕೋಟಾ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಬಾಜಪ ಮುಖಂಡ ಉದಯಕುಮಾರ ರಟಕಲ,ದಲಿತ ಮುಖಂಡ ಎಸ್.ಜಿ.ಭಾರತಿ, ಡೊಂಗರಗಾಂವ ಗ್ರಾಮ ಪಂಚಾಯತ ಸದಸ್ಯ ಅನೀಲಕುಮಾರ ಡೊಂಗರಗಾಂವ ಕಾರ್ಯಕ್ರಮದ ನೇತೃತ್ವವನ್ನು ಮಧುಕರ ವಿ.ಕಾಂಬಳೆ ವಹಿಸಿದ್ದರು. ನಿರೂಪಣೆಯನ್ನು ಸಿದ್ದಾರ್ಥ ಚಿಂಚನಸೂರ ನಿರೂಪಿಸಿದರು.ಟ್ರಸ್ಟನ್ ಕಾರ್ಯದರ್ಶಿ ಅಶ್ವಿನಿ ಎಂ.ಕಾಂಬಳೆ ಇದ್ದರು.
ಈ ಸಂದರ್ಭದಲ್ಲಿ ಜೈರಾಜ ಕಿಣಗಿಕರ್,ರವಿ ಸಿಂಗೆ,ಆನಂದ ತೆಗನೂರ,ಸುನೀಲಕುಮಾರ ಕಾಂಬಳೆ,ಅರುಣಕುಮಾರ ಸೇರಿದಂತೆ ಇತರರು ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…