ಕಲಬುರಗಿ; ನಗರದ ಕನ್ನಡ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ವತಿಯಿಂದ ದಲಿತ ಮುಂದಿರುವ ಸವಾಲುಗಳು ವಿಚಾರ ಸಂಕಿರಣ ಕಾರ್ಯಕ್ರಮ ಜರುಗಿತು.
ದೆಹಲಿಯಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ರಾಷ್ಟ್ರಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತರಾದ ಸಮಿತಿಯ ರಾಜ್ಯ ಸಂಚಾಲಕ ಡಿ.ಆರ್. ಪಾಂಡುರಂಗಸ್ವಾಮಿ ಹಾಗೂ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ ರಾಷ್ಟ್ರ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಪಡೆದ ರಾಜ್ಯ ಸಂಘಟನಾ ಸಂಚಾಲಕ ತರೀಕೆರೆ ಎನ್.ವೆಂಕಟೇಶ ಇವರಿಗೆ ಅಭಿನಂದನಾ ಸಮಾರಂಭದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಭೀಮಾಶಂಕರ ಎಮ್.ಕದಂ, ರಾಜ್ಯ ಸಂಚಾಲಕ ಶಿವಾನಂದ ಎಮ್.ಸಾವಳಗಿ, ರಮೇಶ ಮಾಡ್ಯಾಳಕರ್, ಜಗದೇವಿ ಹೆಗಡೆ, ನವ್ಯಶ್ರೀ ಎಂ.ಆರ್, ಭವಾನಿ ಎಂ.ವಿ, ಗುರುಭಾಯಿ ಕಟ್ಟಿಮನಿ, ಕುಡಿಗಲ್ ರಮೇಶ, ಮಾರುತಿ ಹೋಸಮನಿ, ಟಿ.ಎಮ್.ಅಂಜನೇಯ, ಭರ್ಮಪ್ಪ ಶಿವಮೊಗ್ಗ, ದುರ್ಗಾ ದಾಸ.ಪಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕಾ ಪದಾಧಿಕಾರಿಗಳು ಇದ್ದರು.