ಅಂಬೇಡ್ಕರ್ ಮೂರ್ತಿಗೆ ಅಪಮಾನಿಸುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ

0
10

ಶಹಾಬಾದ: ಕಲಬುರಗಿ ಕೋಟನೂರ್ (ಡಿ) ಗ್ರಾಮದಲ್ಲಿನ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ಕೃತ್ಯವನ್ನು ಕಾಂಗ್ರೆಸ್ ಜಿಲ್ಲಾ ವಕ್ತಾರ ಪೀರಪಾಶಾ ಖಂಡಿಸಿ ತಕ್ಷಣ ಕೃತ್ಯವೇಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಇಡೀ ದೇಶಕ್ಕೆ ಸಮಾನತೆಯ ಸಂವಿಧಾನ ನೀಡಿರುವ ಬಾಬಾ ಸಾಹೇಬರಿಗೆ ಭಾರತೀಯರ ಮೇಲೆ ಮಹದುಪಕಾರ ಮಾಡಿದ್ದಾರೆ. ಯಾರೋ ಕಿಡಿಗೇಡಿಗಳು, ಮತಿಹೀನರು ರಾತ್ರಿ ಹೊತ್ತಲ್ಲಿ ಹೋಗಿ ಅಂಬೇಡ್ಕರ್ ಪುತ್ಥಳಿಯನ್ನು ಅಪಮಾನಿಸಿ ಇಡೀ ದೇಶಕ್ಕೆ ಮತ್ತು ಸಂವಿಧಾನಕ್ಕೆ ದ್ರೋಹ ಎಸಗಿದ್ದಾರೆ.

Contact Your\'s Advertisement; 9902492681

ಸಮಾಜದಲ್ಲಿ ಅಶಾಂತಿ ಹುಟ್ಟು ಹಾಕುವ ಪ್ರಯತ್ನ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಕ್ರಮಕೈಗೊಳ್ಳಬೇಕು. ಅಲ್ಲದೇ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here