ಬಿಸಿ ಬಿಸಿ ಸುದ್ದಿ

ಟ್ರಸ್ಟ ಮೂಲಕ ಸಾಮಾಜಿಕ ಕಳಕಳಿ ಹೆಚ್ಚಳ

ಕಲಬುರಗಿ: ಸಾಮಾಜಿಕ ಕಳಕಳಿಯ ದೃಷ್ಟಿಯಿಂದ ಆರಂಭಿಸಿರುವ ಟ್ರಸ್ಟ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಆಯೋಜಿಸಿ,ಸ್ವ ಉದ್ಯೋಗಕ್ಕೆ ಉತ್ತೇಜಿಸಿ ಸ್ವಾಲಂಬಿಗಳನ್ನಾಗಿ ಮಾಡಬೇಕು ಎಂದು ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಬಸವರಾಜ ಬಿರಬಿಟ್ಟಿ ಅಭಿಪ್ರಾಯಪಟ್ಟರು.

ನಗರದ ಕೋರ್ಟ ರಸ್ತೆಯಲ್ಲಿರುವ ಸುಸ್ವಾದ ಹೋಟೆಲ್ ನಲ್ಲಿ ಆಯೋಜಿಸಿದ ರಿತ್ವಿಕ ಗ್ರಾಮೀಣ ಅಭಿವೃದ್ಧಿ ಚಾರಿಟೇಬಲ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಉಳ್ಳವರು ಮತ್ತು ಇಲ್ಲದವರ ನಡುವೆ ಕೊಂಡಿಯಾಗಿ ಕೆಲಸ ಮಾಡಿದಾಗ ಹಿಂದುಳಿದ ಸಮುದಾಯದ ಕುಟುಂಬಗಳು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಲಿದೆ ಎಂದರು.

ಚಾರಿಟೇಬಲ್ ಟ್ರಸ್ಟ್‍ನ ಆರೋಗ್ಯ ಕಾಳಜಿ ಉಪಕ್ರಮಕ್ಕೆ ಕೊಡುಗೆಯು ಸಂಗೀತ ಮತ್ತು ಸಾಮಾಜಿಕ ಆಶಯಗಳ ಅದರ ಪ್ರಯತ್ನಗಳ ಜೊತೆಗೆ ಗ್ರಾಮೀಣ ಭಾರತದಲ್ಲಿ ಸಾಮಾಜಿಕವಾಗಿ ಹಿಂದುಳಿದ ವರ್ಗಗಳಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಆರೋಗ್ಯ ಕಾಳಜಿಯನ್ನು ಒದಗಿಸುವ ಕಡೆಗೆ ಒಂದು ಹೆಜ್ಜೆಯಾಗಿದೆ. ನಮ್ಮ ಬೆಂಬಲದೊಂದಿಗೆ, ಟ್ರಸ್ಟ್ ತನ್ನ ಉದಾರ ಕೆಲಸಗಳನ್ನು ಮುಂದುವರೆಸಬಹುದು ಮತ್ತು ನಮ್ಮ ಪ್ರದೇಶದ ಜನರ ಜೀವನವನ್ನು ಸುಧಾರಿಸಬಹುದು.ಇದು ವೃದ್ಧರಿಗೆ ಉತ್ತಮ ವೃದ್ಧಾಶ್ರಮವಾಗಲಿದೆ ಎಂದರು.

ಸಾಹಿತಿ ಹಾಗೂ ಯುವ ಹೋರಾಟಗಾರ ನಾಗಲಿಂಗಯ್ಯ ಮಠಪತಿ ಮಾತನಾಡಿ,ಉತ್ತಮ ಸದುದ್ದೇಶದಿಂದ ಟ್ರಸ್ಟ್ ಆರಂಭಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಪದಾಧಿಕಾರಿಗಳು ನಿರಂತರವಾಗಿ ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮಹಿಳೆಯರು, ಯುವಜನರು ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.ಸಮಾಜ ಸೇವೆ ಮಾಡುವುದರಿಂದ ಪುಣ್ಯ ದೊರೆಯುತ್ತದೆ.ಇನ್ನೂ ಹೆಚ್ಚಿನ ಸಮಾಜ ಮುಖಿ ಕೆಲಸಗಳನ್ನು ಮಾಡುವಂತೆ ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಬರಾಯ ಬೆಳಕೋಟ, ಮುಖ್ಯ ಅತಿಥಿಗಳಾಗಿ ಛಾಯಾಗ್ರಾಹಕ ರಾಜಕುಮಾರ ಉದನೂರ, ಶಾಮರಾವ್ ಸೂರನ್,ಅನೀಲಕುಮಾರ ಡೊಂಗರಗಾಂವ, ಮಧುಕರ ಕಾಂಬಳೆ ಆಗಮಿಸಿದ್ದರು.ಕಾರ್ಯಕ್ರಮದ ನೇತೃತ್ವವನ್ನು ರವಿ ಎ.ಸಿಂಗೆ ವಹಿಸಿದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

45 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago