ಕಲಬುರಗಿ: ಕೋಟನೂರ (ಡಿ )ಗ್ರಾಮದಲ್ಲಿನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ಕೃತ್ಯವನ್ನು ದಲಿತ ವಿದ್ಯಾರ್ಥಿ ಹುಸೇನಿ ಪಾಳಾ ಖಂಡಿಸಿ ತಕ್ಷಣ ಕೃತ್ಯವೇಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಇಡೀ ದೇಶಕ್ಕೆ ಸಮಾನತೆ ಸoವಿಧಾನ ನೀಡಿರುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮತಿಹೀನರು ರಾತ್ರಿ ಹೊತ್ತಿನಲ್ಲಿ ಹೋಗಿ ಅಂಬೇಡ್ಕರ್ ಪುತ್ತಳಿಯನ್ನು ಅಪಮಾನಿಸಿ ಇಡೀ ದೇಶಕ್ಕೆ ಮತ್ತು ಸಂವಿಧಾನಕ್ಕೆ ದ್ರೋಹ ಎಸಗಿದ್ದಾರೆ.
ಸಮಾಜದಲ್ಲಿ ಅಶಾಂತಿ ಹುಟ್ಟು ಹಾಕುವ ಪ್ರಯತ್ನ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೆ ಆ ಕಿಡಿಗೇಡಿಗಳಿಗೆ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರೆ.