ಬಿಸಿ ಬಿಸಿ ಸುದ್ದಿ

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬುವುದಕ್ಕೆ ಜಿಲ್ಲಾಧಿಕಾರಿ ಸೆಂಥಿಲ್ ರಾಜೀನಾಮೆಯೇ ಸಾಕ್ಷಿ: ಎಸ್‍ಡಿಪಿಐ

ಬೆಂಗಳೂರು: ಕೇಂದ್ರದಲ್ಲಿ ಮೋದಿ ಎರಡನೇ ಬಾರಿ ಅಧಿಕಾರವನ್ನು ಪಡೆದ ನಂತರ ದೇಶದಲ್ಲಿರುವ ವಿರೋಧ ಪಕ್ಷಗಳನ್ನು ನಿಯಂತ್ರಿಸುವ ಪ್ರಕ್ರಿಯೆಯ ಮುಂದುವರಿದ ಭಾಗವಾಗಿ ಕೆಲ ನಿರ್ದಿಷ್ಟ ಇಲಾಖೆಗಳನ್ನು ಹಾಗೂ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನಿಯಂತ್ರಿಸಲು ಹೊರಟಿರುವ ಕೇಂದ್ರ ಸರಕಾರದ ನಡೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಅಲ್ಲದೇ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‍ರವರ ರಾಜೀನಾಮೆಯೇ ಸಾಕ್ಷಿ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‍ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಹೇಳಿದ್ದಾರೆ.
ಇಂತಹ ಸಂದಿಗ್ನ ಪರಿಸ್ಥಿತಿಯಲ್ಲಿ ನಾವು ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸಬೇಕು. ನಿರಂಕುಶ ಪ್ರವೃತ್ತಿಯನ್ನು ವಿರೋಧಿಸಬೇಕು. ಇದಕ್ಕಾಗಿ ಫ್ಯಾಸಿಸ್ಟ್ ವಿರೋಧಿ ಶಕ್ತಿಗಳು ಒಂದಾಗಬೇಕು. ಆದರೆ ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವ ನಿಟ್ಟಿನಲ್ಲಿ ನಾವು ಒಂದಾಗದಿರುವುದು ಸಹ ಪ್ರಜಾಪ್ರಭುತ್ವಕ್ಕೆ ದೊಡ್ಡ ಸವಾಲಾಗಿದೆ ಎಂದು ಅವರು ಅಭಿಪ್ರಾಯಿಸಿದ್ದಾರೆ. ಕೇಂದ್ರ ಸರಕಾರ ಲೋಕಸಭೆಯಲ್ಲಿ ಯಾವುದೇ ಮುಕ್ತ ಚರ್ಚೆಗೆ ಅವಕಾಶ ನೀಡದೆ ಹಲವಾರು ಮಸೂದೆಗಳನ್ನು ಏಕಪಕ್ಷೀಯವಾಗಿ ಜಾರಿ ಮಾಡುತ್ತಿರುವುದು ಸಹ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಎಂಬುವುದನ್ನು ನಾವು ಅರಿತುಕೊಳ್ಳಬೇಕಾಗಿದೆ. ವಿವಿಧತೆಯಲ್ಲಿ ಏಕತೆ ಎಂಬ ಪರಿಕಲ್ಪನೆಯನ್ನು ದೇಶದ ಸಂವಿಧಾನದ ಆಶಯ. ಈ ಆಶಯವನ್ನು ಈಡೇರಿಸಲು ಜನಾಂದೋಲನದ ಅನಿವಾರ್ಯತೆಯಿದೆ. ಈ ಜನಾಂದೋಲನದ ಆರಂಭವು ಕರ್ನಾಟಕದಿಂದಲೇ ಪ್ರಾರಂಭವಾಗಲಿ ಎಂದು ಇಲ್ಯಾಸ್ ತುಂಬೆ ಕರೆ ನೀಡಿದ್ದಾರೆ.
emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

4 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

6 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago