ಬಿಸಿ ಬಿಸಿ ಸುದ್ದಿ

ಸರ್ಕಾರ ನೌಕರರಿಗೆ ಓ.ಪಿ.ಎಸ್ ಜಾರಿಗೊಳಿಸುವುದು ಶತಸಿದ್ಧ: ಶಾಂತಾರಾಮ ತೇಜ್

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಎನ್ ಪಿ ಎಸ್ ನೌಕರರ ಸಂಘ ಬೆಂಗಳೂರು ಜಿಲ್ಲಾ ಘಟಕ ಕಲಬುರಗಿ ವತಿಯಿಂದ ನಗರದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎನ್ ಪಿ ಎಸ್ ರದ್ದು ಪಡಿಸಿ ಒಪಿಎಸ್ ಜಾರಿಗೆ ತರುವಂತೆ ರಾಜ್ಯಾಧ್ಯಕ್ಷ ಶಾಂತಾರಾಮ ತೇಜ್ ಅವರು ಮನವಿ ಸಲ್ಲಿಸಿ ಮಾತನಾಡುತ್ತಾ ಕರ್ನಾಟಕ ರಾಜ್ಯ ಸರಕಾರಿ ಎನ್ ಪಿ ಎಸ್ ನೌಕರರ ಸಂಘ ಸ್ಥಾಪನೆಗೊಂಡ 10 ವರ್ಷಗಳ ಅವಧಿಯಲ್ಲಿ ಸಂಘವು ಹಲವಾರು ರೀತಿಯ ವಿಶಿಷ್ಠವಾದ ಹೋರಾಟಗಳನ್ನು ಮಾಡುತ್ತಾ ಬಂದಿರುವುದು ತಮಗೆಲ್ಲ ತಿಳಿದ ವಿಷಯ ಅದಕ್ಕೆ ತಾಲೂಕು ಹಾಗೂ ಜಿಲ್ಲಾ ಎನ್ ಪಿ ಎಸ್ ನೌಕರರ ಸಂಘಗಳ ಸಹಕಾರದಿಂದ ನಮ್ಮ ಹೋರಾಟ ಗಟ್ಟಿಗೊಂಡಿದೆ.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದಂತೆ ಎನ್ ಪಿ ಎಸ್ ರದ್ದು ಪಡಿಸಿ ಒಪಿಎಸ್ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರನ್ನು ಹಲವು ಬಾರಿ ಭೇಟಿ ಆಗಿದ್ದೆವೆ ನಮಗೆ ಸಂಪೂರ್ಣವಾಗಿ ಎನ್ ಪಿ ಎಸ್ ರದ್ದು ಪಡಿಸುವುದಾಗಿ ಹೇಳಿದ್ದಾರೆ ನೌಕರರು ಆಂತಕ ಪಡುವ ಅಗತ್ಯವಿಲ್ಲ ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು.

ಅವರು ಸಹ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ. ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರೊಂದಿಗೆ ಸುಮಾರು 15 ನಿಮಿಷಗಳ ಕಾಲ ಎನ್ ಪಿ ಎಸ್ ನೌಕರರ ಸಾಧಕ ಬಾಧಕಗಳನ್ನು ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ಪಿ ತಳವಾರ, ರಾಜ್ಯ ಕಾರ್ಯದರ್ಶಿ ವೃಷಬೆಂದ್ರ ಹೀರೆಮಠ ರವಿ ಅಸುಟ್ಟಿ, ರಾಜ್ಯ ಪತ್ರಿಕಾ ಮಾಧ್ಯಮದ ಪ್ರತಿನಿಧಿ ಮಹಾದೇಶ ವರ್ಮಾ, ರಾಜ್ಯ ಸಂಘಟನಾ ಕಾರ್ಯದರ್ಶಿ ಯಶವಂತಿ ಮೇಡಂ, ಜಿಲ್ಲಾ ಅಧ್ಯಕ್ಷರಾದ ಧರ್ಮರಾಜ ಜವಳಿ, ಜಿಲ್ಲಾ ಗೌರವಾಧ್ಯಕ್ಷರಾದ ಅಶೋಕ ಸೊನ್ನ ಯಾದಗೀರಿ ಎನ್ ಪಿ ಎಸ್ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಆನಂದ ಕಜಗಾರ ಪ್ರಧಾನ ಕಾರ್ಯದರ್ಶಿ ಚಂದು ಜಾದವ, ಬೀದರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ತಳವಾಡೆ, ಸಂಘದ ಪದಾಧಿಕಾರಿಗಳಾದ ಮಹೇಶ ನಾಗಮಾರಪಳ್ಳಿ, ಸುನಿಲ್ ದತ್ತ ಡಾಂಗೆ, ಶಿವಪ್ರಸಾದ ಪಿ ಜಿ, ಸಂತೋಷ ಕಲ್ಮೂಡ್, ರೇಣುಕಾ ಎನ್,ಪಡೆಯಪ್ಪ, ಮಲ್ಲಿಕಾರ್ಜುನ ಕಲ್ಯಾಣರಾವ, ಶಹಾಬಾದ್ ಅಧ್ಯಕ್ಷರಾದ ಶರಣಪ್ಪ, ಲಲಿತಾ ಪಾಟೀಲ, ಜಯಶ್ರೀ, ರಾಘವೇಂದ್ರ, ಕಾಶಿರಾಯ ಅಶೋಕ ಜೆ ಟಿ, ತಿಪ್ಪಣ್ಣ ಮೆಳಕುಂದಿ ರವಿ ಜಾಧವ ಇತರ ಎನ್ ಪಿ ಎಸ್ ನೌಕರರು ಮತ್ತು ಒಪಿಎಸ್ ನೌಕರರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

34 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

37 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

40 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago