ಶಹಾಪುರ: ವಿಜ್ಞಾನದ ಪ್ರಗತಿಯೇ ದೇಶದ ಪ್ರಗತಿ

ಶಹಾಪುರ :ಒಂದು ರಾಷ್ಟ್ರದ ಪ್ರಗತಿ ವಿಜ್ಞಾನ ಪ್ರಗತಿಯನ್ನು ಅವಲಂಬಿಸಿದೆ ವಿಜ್ಞಾನದ ಪ್ರಗತಿ ಹೆಚ್ಚಾದಂತೆ ಜನರ ಜೀವನದ ಗುಣಮಟ್ಟ ಸುಧಾರಿಸುತ್ತದೆ. ಪ್ರಸ್ತುತ ಭಾರತ ವಿಜ್ಞಾನ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ತೋರುತ್ತಿದೆ.

ಎಂದು ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ವಿಜ್ಞಾನ ಪರಿಷತ್ತಿನ ರಾಜ್ಯ ಅಧ್ಯಕ್ಷ ಗಿರೀಶ ಕಡ್ಲೇವಾಡ ಮಾತನಾಡಿದರು ಶಹಾಪುರ ತಾಲೂಕಿನ ಬೀರನೂರ ಗ್ರಾಮದ ಹತ್ತಿರ ಯಶಸ್ವಿ ಇಂಟರ್ನ್ಯಾಷನಲ್ ಸ್ಕೂಲ್ 6ನೇ ವಾರ್ಷಿಕೋತ್ಸವದಲ್ಲಿ ಕಾರ್ಯಕ್ರಮದ ವಿದ್ಯಾರ್ಥಿಗಳಿಂದ ವಿಜ್ಞಾನ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿ ತಾಲೂಕ ಅಧ್ಯಕ್ಷ ಹಾಗೂ ಪತ್ರಕರ್ತ ಗುರುಬಸಪ್ಪ ಸಜ್ಜನಶೆಟ್ಟಿ ಮಾತನಾಡಿ ಮಣ್ಣು ನೀರು ಗಾಳಿ ಗುರುತರವಾದ ಕೊಡುಗೆ ನೀಡುವ ಸಂಪನ್ಮೂಲ ಗಳಾಗಿವೆ
ವಿದ್ಯಾರ್ಥಿಗಳು ಸಂಪನ್ಮೂಲಗಳ ಸಂರಕ್ಷಣೆ ಜೊತೆಗೆ ಪರಿಸರ ಸಂರಕ್ಷಣೆಯ ಬಗ್ಗೆ ಕಾಳಜಿ ವಹಿಸಬೇಕೆಂದು ಕರೆ ನೀಡಿದರು. ಕಲಬುರಗಿ ಮಹಾನಗರದ ಎಕ್ಸಲೆಂಟ್ ಟುಟೋರಿಯಲ್ ಮುಖ್ಯಸ್ಥರಾದ ಮನೋಜಕುಮಾರ ಬುರಬುರೆ ಮಾತನಾಡಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕರಾದ ನಾಗರಾಜ್ ಎಸ್ ಪಾಟೀಲ್ ಅವರು ವಹಿಸಿ ಮಾತನಾಡಿದರು. ನಂತರ ವಿದ್ಯಾರ್ಥಿಗಳ ಪಾಲಕ.ಪೋಷಕರು. ಗ್ರಾಮಸ್ಥರು ಈ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ಆರನೇ ತರಗತಿಯ ಎಲ್ಲಾ ಒಳಮಕ್ಕಳು 40ಕ್ಕೂ ಹೆಚ್ಚು ವಿವಿಧ ವಿಜ್ಞಾನ ವಸ್ತುಗಳ ಪ್ರದರ್ಶನ ನೀಡಿ ಬಂದಂತ ಅತಿಥಿಗಳಿಗೆ ಕನ್ನಡ ಹಿಂದಿ ಇಂಗ್ಲಿಷ್ ಭಾಷೆಯಲ್ಲಿ ವಿವರಣೆ ನೀಡಿದರು.

ಶಿಕ್ಷಕರಾದ ಅಗಸ್ಥಿನ ನಾಯಕ. ದೇವಮ್ಮ ಕಣಜಿಕರ. ಸುವರ್ಣ ವಡ್ಡಡಗಿ. ಮೈಬುಬ್ಬಿ ಎ ಎಸ್. ಶೇಕ. ವಿಜಯಲಕ್ಷ್ಮಿ ಕಣಜಿಕರ.ಇತರರು ಇದ್ದರು ಬಹುಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪಾಲಕರು ಪಾಲ್ಗೊಂಡಿದ್ದರು. ಪ್ರಾರ್ಥನ ಗೀತೆ ಅನ್ನಮ್ಮ ಎಂ ಬಡಿಗೇರ ಹಾಗೂ ಗಿರಿಜಾ ವರದಾ ಮಾಡಿದರು. ಸ್ವಾಗತವನ್ನು ನೇತ್ರಾವತಿ ಬಿ ಪತ್ತಾರ. ನಿರೂಪಣೆ ಆನಂದಕುಮಾರ ಎಸ್ ಗೋಗಿ ವಂದನಾರ್ಪಣೆ ಶ್ರೀಮತಿ ಲತಾ ಮಾಡಿದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

2 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

3 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

5 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

16 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

18 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420