ಪರಹತಾಬಾದ : ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಗ್ರಾಮದೇವತೆ ಶ್ರೀ ಮರಗಮ್ಮ ದೇವಿಯ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ದಿ.02 ಫೆಬ್ರವರಿ ರಂದು ಬೆಳಗ್ಗೆ 11ಗಂಟೆಗೆ ಶ್ರೀ ಮರಗಮ್ಮದೇವಿ ದೇವಸ್ಥಾನ ಆವರಣದಲ್ಲಿ ನಡೆಯಲಿದೆ.
ದಿವ್ಯ ಸಾನಿಧ್ಯವನ್ನು ಹೊನ್ನಕಿರಣಗಿಯ ರಾಚೋಟೇಶ್ವರ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಷ. ಬ್ರ. ಚಂದ್ರಗುಂಡ ಶಿವಾಚಾರ್ಯರು ವಹಿಸುವರು. ಸಾನಿಧ್ಯವನ್ನು ಮರಗಮ್ಮ ದೇವಿಯ ಅರ್ಚಕರಾದ ಮರೆಪ್ಪ ಪೂಜಾರಿ ವಹಿಸುವರು. ಅಫಜಲಪುರ ಶಾಸಕ ಎಂ ವೈ ಪಾಟೀಲ ಅವರು ಧ್ವನಿ ಸುರಳಿ ಬಿಡುಗಡೆ ಮಾಡುವರು. ಧ್ವನಿ ಸುರುಳಿ ಭಕ್ತಿ ಸೇವೆಯನ್ನು ಕೆಪಿಸಿಸಿ ಸದಸ್ಯ ಜ್ಯೋತಿ ಅರುಣಕುಮಾರ ಎಂ ವೈ ಪಾಟೀಲ ಮಾಡುವರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಗ್ರಾಮದ ಹಿರಿಯ ಮುಖಂಡರಾದ ಬದ್ರಿನಾಥ್ ಬಿ ಸಜ್ಜನ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಸಾಯಬಣ್ಣ ನೀಲಪ್ಪಗೋಳ. ಮಾಜಿ ಜಿಲ್ಲಾ ಸದಸ್ಯರಾದ ಸೋನುಬಾಯಿ ಜಯಕುಮಾರ ಕೋಣಿನ. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಲ್ಲಿನಾಥ್ ಕೆ ಬುಸ. ಪರಹತಾಬಾದ ಪೊಲೀಸ್ ಸ್ಟೇಷನ್ ವೃತ್ತ ನಿರೀಕ್ಷಕರಾದ ಮಲ್ಲಿಕಾರ್ಜುನ ಇಕ್ಕಳಕಿ. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಅಧ್ಯಕ್ಷರಾದ ಗುರುಬಸಪ್ಪ ಸಜ್ಜನಶೆಟ್ಟಿ. ಇವರು ಆಗಮಿಸುವರು.
ದ್ವನಿಸುರುಳಿ ಸಾಹಿತ್ಯವನ್ನು ಈರಮ್ಮ ಗುರುಸ್ವಾಮಿ ಅವರು ರಚಿಸಿದ್ದಾರೆ ಸಂಗೀತ ಸೇವೆಯನ್ನು ಮಲ್ಲಿಕಾರ್ಜುನ ಮಣ್ಣೂರ ಪರಹತಾಬಾದ. ಮಾಡಲಿದ್ದಾರೆ ಎಂದು ದೇವಸ್ಥಾನದ ಭಕ್ತರಾದ ಅಶೋಕಕುಮಾರ ಕಂತೆಗೋಳ ಅವರು ತಿಳಿಸಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…