ನೇತಾಜಿ ಬೋಸ್ ಅಪ್ರತಿಮ ಕ್ರಾಂತಿಕಾರಿ: ಇಂಕ್ವಿಲಾಬ್ ಘೋಷಣೆ ಮೊಳಗಿಸಿದ ವಿದ್ಯಾರ್ಥಿಗಳು

ವಾಡಿ: ದೇಶದ ಅತ್ಯುನ್ನತ ಪದವಿಯಾದ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ರ್ಯಾಂಕ್ ಪಡೆದ ನೇತಾಜಿ ಸುಭಾಷಚಂದ್ರ ಬೋಸ್ ಅವರು ಪ್ರಮಾಣಪತ್ರಗಳನ್ನು ಹರಿದು ಹಾಕುವ ಮೂಲಕ ದೊಡ್ಡ ಹುದ್ದೆಯ ಅವಕಾಶವನ್ನು ಧಿಕ್ಕರಿಸುವ ಮೂಲಕ ಅಪ್ರತಿಮ ಕ್ರಾಂತಿಕಾರಿಯಾಗಿ ಹೊರ ಹೊಮ್ಮಿದರು ಎಂದು ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) ಜಿಲ್ಲಾಧ್ಯಕ್ಷೆ ಸ್ನೇಹಾ ಕಟ್ಟಿಮನಿ ಹೇಳಿದರು.

ಪಟ್ಟಣದಲ್ಲಿ ಬುಧವಾರ ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) ಹಾಗೂ ಆಲ್ ಇಂಡಿಯಾ ಡೆಮಾಕ್ರೇಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಸಂಘಟನೆಗಳ ನೇತೃತ್ವದಲ್ಲಿ ಏರ್ಪಡಿಸಲಾಗಿದ್ದ ನೇತಾಜಿ ಸುಭಾಷಚಂದ್ರ ಬೋಸ್ ಅವರ ಭಾವಚಿತ್ರ ಮೆರವಣಿಗೆ ಉದ್ಘಾಟಿಸಿ ಅವರು ಮಾತನಾಡಿದರು.

ಬ್ರಿಟೀಷರು ನೀಡುವ ಗುಲಾಮಿ ನೌಕರಿ ಮಾಡುವುದಕಿಂತ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಶೋಷಣೆ ದಬ್ಬಾಳಿಕೆಯಿಂದ ಕೂಡಿದ ಬ್ರಿಟೀಷ್ ವ್ಯವಸ್ಥೆಯ ಹೆಡೆಮುರಿ ಕಟ್ಟಬೇಕು ಎಂಬ ಪಣ ತೊಟ್ಟರು.

ಅನ್ಯಾಯಗಳನ್ನು ಕಂಡು ಸಿಡಿಯುತ್ತಿದ್ದ ನೇತಾಜಿಯವರು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯ ಸಮಾಜದ ಕನಸು ಕಂಡಿದ್ದರು. ಅವರ ಕನಸಿನ ಸಮಾಜವಾದ ವ್ಯವಸ್ಥೆ ಸ್ಥಾಪನೆಗೆ ಅಂದಿನ ಕೆಲ ಸಂಧಾನಪರ ಸ್ವಾತಂತ್ರ್ಯ ಹೋರಾಟಗಾರರು ಅಡ್ಡಗಾಲು ಹಾಕಿದ್ದರು ಎಂದು ದೂರಿದರು.

ಎಐಡಿಎಸ್‍ಒ ನಗರ ಸಮಿತಿ ಕಾರ್ಯದರ್ಶಿ ಗೋವಿಂದ ಯಳವಾರ ಮಾತನಾಡಿ, ಪ್ರಸಕ್ತ ನಮ್ಮ ದೇಶದ ಸಾಮಾಜಿಕ ವ್ಯವಸ್ಥೆ ಮತ್ತೊಂದು ಕ್ರಾಂತಿಗಾಗಿ ಕೂಗುತ್ತಿದೆ. ಜಾತಿ, ಧರ್ಮ, ಧ್ವಜಗಳ ಹೆಸರಿನಲ್ಲಿ ನಮ್ಮ ರಾಜಕಾರಣಿಗಳು ಯುವಜನರ ಐಕ್ಯತೆಯನ್ನು ಒಡೆದು ಹಾಕುತ್ತಿದ್ದಾರೆ.

ಕೋಮು ಸಂಘರ್ಷಗಳು ಸಾಮಾಜದ ಅಶಾಂತಿಗೆ ಕಾರಣವಾಗುತ್ತಿವೆ. ಭಾರತೀಯರು ಎಂಬ ಭಾವಕ್ಕೆ ಕೋಮುವಾದ ದೊಡ್ಡ ಪೆಟ್ಟು ನೀಡುತ್ತಿದೆ. ಕುವೆಂಪು ಸಾರಿದ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಿದ್ದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾಂಗೀಯ ಘರ್ಷಣೆಗಳು ಭುಗಿಲೇಳುತ್ತಿವೆ. ವಿದ್ಯಾರ್ಥಿ ಯುವಜನರು ಭ್ರಷ್ಟ ರಾಜಕೀಯ ಪಕ್ಷಗಳ ನಾಯಕರ ಬಾಲಂಗೋಚಿಗಳಾಗದೆ ವೈಜ್ಞಾನಿಕ ಚಿಂತನೆಗಳ ತಳಹದಿಯಲ್ಲಿ ಸಂಘಟಿತರಾಗುವ ಮೂಲಕ ನೇತಾಜಿ ಬೋಸ್ ಅವರ ಕನಸು ನನಸು ಮಾಡಲು ಮುಂದಾಗಬೇಕು ಎಂದರು.

ನಿವೃತ್ತ ಹಿರಿಯ ಶಿಕ್ಷಕ ಅನೀಲಕುಮಾರ ಕುಲಕರ್ಣಿ ನೇತಾಜಿ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸುವ ಮೂಲಕ ವಿದ್ಯಾರ್ಥಿಗಳ ಪ್ರಭಾತ್‍ಪೇರಿಗೆ ಚಾಲನೆ ನೀಡಿದರು. ಎಐಡಿವೈಒ ಕಾರ್ಯದರ್ಶಿ ಗೌತಮ ಪರ್ತೂಕರ, ಎಐಡಿಎಸ್‍ಒ ಅಧ್ಯಕ್ಷ ವೆಂಕಟೇಶ ದೇವದುರ್ಗ, ಶಿಕ್ಷಕರಾದ ಗೀತಾ ಠಾಕೂರ, ಯಾಸ್ಮೀನ್ ಬೇಗಂ, ರುಕ್ಮಿಣಿ, ಮುಖಂಡರಾದ ಗೋದಾವರಿ ಕಾಂಬಳೆ, ಶರಣುಕುಮಾರ ದೋಶೆಟ್ಟಿ, ಶರಣು ಹೇರೂರ, ದತ್ತಾತ್ರೇಯ ಹುಡೇಕರ, ಸಂಪತಕುಮಾರ, ಜೈಭೀಮ್ ದಾಸರ, ರಾಜು ಒಡೆಯರಾಜ, ಮಹೆಬೂಬ್ ಸೇರಿದಂತೆ ವಿವಿಧ ಪ್ರೌಢ ಶಾಲೆಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿದ್ಧಾರ್ಥ ತಿಪ್ಪನೋರ ನಿರೂಪಿಸಿ, ವಂದಿಸಿದರು.

emedialine

Recent Posts

ಸುರಪುರ:ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ಪೂರ್ವಭಾವಿ ಸಭೆ

ಸುರಪುರ: ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ನಗರದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ…

10 seconds ago

ಕೃಷಿ ಇಲಾಖೆ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ

ಸುರಪುರ: ನಮ್ಮ ಸರಕಾರ ರೈತರಿಗಾಗಿ ಹಲವಾರು ಯೋಜನೆಗಳನ್ನು ಜೊರಿಗೊಳಿಸಿದ್ದು ರೈತರು ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳ ಬೇಕು ಎಂದು ಶಾಸಕ…

2 mins ago

ವಿದ್ಯಾರ್ಥಿನಿಯರಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಸೈಕಲ್‍ ವಿತರಣೆ

ಕಲಬುರಗಿ: ನಗರದ ಎನ್.ವಿ ಸಂಸ್ಥೆಯ ಸತ್ಯಪ್ರಮೋದತೀರ್ಥ ಸಭಾಂಗಣದಲ್ಲಿ ಎನ್.ವಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಗುಲಬರ್ಗ ನಾರ್ಥವತಿಯಿಂದ ವಿದ್ಯಾರ್ಥಿನಿಯರಿಗೆ…

8 mins ago

ಕಲಬುರಗಿಯಲ್ಲಿ ರೈತರ ಜಿಲ್ಲಾ ಸಮಾವೇಶ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಶಾಖೆ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ರೈತ ಸಮಾವೇಶವನ್ನು ಸಂಘದ…

10 mins ago

ಪ್ರಶಾಂತ ಡಿ ಜಾನಕರ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ 8ನೇ ಎಥ್ಲೇಟಿಕ್ ಮೀಟ್ 2024-25 ರಾಜ್ಯ ಮಟ್ಟದ 200 ಮಿಟರ್ ಓಟದ ಸ್ಪರ್ಧೆಯಲ್ಲಿ…

13 mins ago

ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿಗೆ ಬಿಳ್ಕೊಡುಗೆ

ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…

18 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420