ಬಿಸಿ ಬಿಸಿ ಸುದ್ದಿ

ಸಂಭ್ರಮದ ಕಳೆ ಕಟ್ಟಿರುವ ಸಂವಿಧಾನ ಜಾಗೃತಿ ಜಾಥಾ; ಬೈಕ್ ರ್ಯಾಲಿ, ಲಂಬಾಣಿ ನೃತ್ಯ

ಕಲಬುರಗಿ; ಸಂವಿಧಾನ ಜಾಗೃತಿ ಜಾಥಾ ಅರನೇ ದಿನವು ಮುಂದುವರೆದಿದ್ದು, ಬುಧವಾರ ಜಿಲ್ಲೆಯ ಕೈಗಾರಿಕೆ ಪಟ್ಟಣಗಳಾದ ಚಿತ್ತಾಪೂರ-ಶಹಾಬಾದ ತಾಲೂಕಿನಲ್ಲಿ ಎರಡು ಸ್ಥಬ್ದಚಿತ್ರ ವಾಹನಗಳು ಸಂಚರಿಸಿ‌ ಸಂವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದವು. ಮೆರವಣಿಗೆ, ಕುಣಿತ, ಕಲಾ ಪ್ರದರ್ಶನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿದ ಸಂವಿಧಾನದ ಸಂಭ್ರಮ ಎಲ್ಲೆಡೆ‌ ಮನೆ‌ ಮಾಡಿದೆ.

ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣ ಹಿನ್ನೆಲೆಯಲ್ಲಿ ಕಳೆದ ಜ.26 ರಿಂದ ಅರಂಭವಾಗಿರುವ ಈ ಜಾಥಾವು ಬುಧವಾರ ಚಿತ್ತಾಪೂರ ತಾಲೂಕಿನ ಅಳ್ಳೊಳ್ಳಿ ಗ್ರಾಮದಲ್ಲಿ ಯುವಕರ ಪಡೆ ಬೈಕ್ ರ‌್ಯಾಲಿ ಮೂಲಕ ತಮ್ಮೂರಿಗೆ ಜಾಗೃತಿ ಜಾಥಾವನ್ನು ಸ್ವಾಗತಿಸಿದರು. ಕೆಲವರಂತು ಅಂಬೇಡ್ಕರ ಮೂರ್ತಿ ಹೊತ್ತ ವಾಹನ ಕಂಡು ಕುಣಿದು ಕುಪ್ಪಳಿಸಿದರು. ಮಾಲಗತ್ತಿ ಗ್ರಾಮದಲ್ಲಿ ಶಾಲಾ ಮಕ್ಕಳು ಅಂಬೇಡ್ಕರ ಭಾವಚಿತ್ರ, ಸಂವಿಧಾನ ಪೀಠಿಕೆ ಪೋಸ್ಟರ್ ಹಿಡಿದು ಸಂಭ್ರಮಿಸಿದರು.

ಅಲ್ಲೂರ(ಬಿ) ಗ್ರಾಮದಲ್ಲಿ ಲಂಬಾಣಿ‌ ಮಹಿಳೆಯರ ಸಾಂಪ್ರದಾಯಿಕ ನೃತ್ಯ, ಡೊಳ್ಳು ಕುಣಿತ ಗಮನ ಸೆಳೆಯಿತು. ತಾಲೂಕ ಪಂಚಾಯತ್ ಇ.ಓ. ನೀಲಗಂಗಾ ಬಬಲಾದ ಅವರು ಸಂವಿಧಾನ ಕುರಿತು ಮಾತನಾಡಿದರು. ಗ್ರಾಮದ ಜನಪ್ರತಿನಿಧಿಗಳು, ಮುಖಂಡರು, ಅಪಾರ ಸಂಖ್ಯೆಯಲ್ಲಿ ಮಹಿಳೆಯರು, ಶಾಲಾ ಮಕ್ಕಳು ಸಾಕ್ಷಿಯಾದರು.

ಅವಿಭಜಿತ ಚಿತ್ತಾಪೂರ ತಾಲೂಕಿನ ಶಹಾಬಾದ, ರಾವೂರ, ಅಲ್ಲೂರ(ಬಿ), ಹೊನಗುಂಟಾ, ಸಾತನೂರ, ಮೋಗಲಾ, ಭಂಕೂರ, ಮಾಲಗತ್ತಿ, ಕರದಾಳ ಗ್ರಾಮದಲ್ಲಿ ಜಾಗೃತಿ ಜಾಥಾ ಸಂಚರಿಸಿತು. ಶಹಾಬಾದ ಪಟ್ಟಣಕ್ಕೆ ಬಂದ ರಥಕ್ಕೆ ತಹಶೀಲ್ದಾರ ಜಗದೀಶ ಮತ್ತು ನಗರಸಭೆಯ ಪೌರಾಯುಕ್ತೆ ಪಂಕಜಾ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ‌ ಮಾಡಿ ಗೌರವ ಸಲ್ಲಿಸಿದರು.

ಹಳ್ಳಿಗಳಲ್ಲಿ ಜಾಗೃತಿ ಜಾಥಾಕ್ಕೆ ಮಹಿಳೆಯರು ಆರತಿ ಬೆಳಗಿ ಕುಂಭ ಕಳಸದೊಂದಿಗೆ ಸ್ವಾಗತಿಸಿದರು. ಇನ್ನು ಸಂವಿಧಾನ ಕುರಿತು ರಸಪ್ರಶ್ನೆ, ಪ್ರಬಂಧ, ಭಾಷಣ ಸ್ಪರ್ಧೆ ವಿಭಾಗದಲ್ಲಿ ವಿಜೇತರಾದ ಮಕ್ಕಳಿಗೆ ಸಂವಿಧಾನ ಪೀಠಿಕೆ, ಸಂವಿಧಾನ ಓದು ಪುಸ್ತಕ ಹಾಗೂ ಮೂಲಭೂತ ಕರ್ತವ್ಯಗಳ ಪುಸ್ತಕ ವಿತರಣೆ ಮಾಡಲಾಯಿತು.

ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಗಳು ಭಾರತದ ಸಂವಿಧಾನ ಪೀಠಿಕೆ ವಾಚನ, ನ್ಯಾಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕುರಿತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಕಲ್ಪನೆ, ಬಸವಣ್ಣನವರ ವಚನಗಳು ಮತ್ತು ಭಾರತ ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆ, ಜಿಲ್ಲೆಯ ಐತಿಹಾಸಿಕ ಸ್ಥಳ, ಕಲೆ, ಸಂಸ್ಕೃತಿ ಬಿಂಬಿಸುವುದರ ಜೊತೆಗೆ ಸಾಹಿತ್ಯ ದಿಗ್ಗಜರ ಪರಿಚಯ ಮಾಡಿಕೊಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ವಾಚನ, ಪ್ರತಿಜ್ಞೆ ಬೋಧನೆ ಮಾಡಿಸಲಾಯಿತು.

ಸಮಾಜ‌ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚೇತನ‌ ಗುರಿಕರ್‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

10 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

10 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

12 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

12 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

12 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

13 hours ago