ಅಲ್ಪಸಂಖ್ಯಾತರ ಸಮುದಾಯದ 4% ಮೀಸಲಾತಿ ಮರು ಸ್ಥಾಪನೆಗೆ ಶಹನಾಜ್‌ ಅಖ್ತರ ಆಗ್ರಹ

ಶಾದಿ ಭಾಗ್ಯ ಪುನಃ ಆರಂಭಕ್ಕೆ ಆಗ್ರಹ

ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ 15 ಸಾವಿರ ಕೋಟಿ ಮೀಸಲಿಡಬೇಕೆಂದು ಆಗ್ರಹ

ಕಲಬುರಗಿ: ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿರುವ ಅಲ್ಪಸಂಖ್ಯಾತ ಸಮುದಾಯದಕ್ಕೆ ನೀಡುತ್ತಿದ್ದ 4% ಮಿಸಲಾತಿ ಮರುಸ್ಥಾಪನೆ ಮಾಡುವ ಭರವಸೆಯನ್ನು ಈ ಬಜೆಟ್ ನಲ್ಲಿ ಈಡೇರಿಸಬೇಕು ಮತ್ತು ಬಜೆಟ್ ನಲ್ಲಿ ಸಮುದಾಯದ ಅಭಿವೃದ್ಧಿಗಾಗಿ 15 ಸಾವಿರ ಕೋಟಿ ಹಣವನ್ನು ಮೀಸಲಿಡಬೇಕೆಂದು ಎಂದು ಸಮಾಜಿ ಕಾರ್ಯಕರ್ತೆ ಹಾಗೂ ಹೋರಾಟಗಾರ್ತಿ ಶಹನಾಜ್‌ ಅಖ್ತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಅವರಿಗೆ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರ ಪರೆದು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ 2024-25 ರ ಬಜೆಟ್‌ ನಲ್ಲಿ ಈ ಹಿಂದೆ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಕ್ಕಳಿಗೆ ಶಾದಿ ಭಾಗ್ಯ ಯೋಜನೆಯನ್ನು ಮರು ಪ್ರಾರಂಭ, ಮಹಿಳೆಯರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಉದ್ಯಮಗಳು ನಡೆಸಲು ಉತ್ತೇಜನ ನೀಡುವುದಕ್ಕೆ ಬಜೆಟ್‌ನಲ್ಲಿ ಯೋಜನೆಯನ್ನು ಜಾರಿಗೆ ತರಬೇಕು. ಕಲಬುರಗಿ, ಬೀದರ್‌ ಮತ್ತು ಬೆಂಗಳೂರಿನಲ್ಲಿ ಉಚಿತ ಐಎಎಸ್‌, ಐಪಿಎಸ್‌ ಕೋಚಿಂಗ್‌ ಸೆಂಟರ್‌ಗಳನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಅಲ್ಪಸಂಖ್ಯಾತರಿಗೆ ಕೆಎಂಡಿಸಿಯಿಂದ ನೀಡಲಾಗುವ ಅರಿವು ಯೋಜನೆ, ಶ್ರಮ ಶಕ್ತಿ,  ಟ್ಯಾಕ್ಸಿ ಆಯ್ಕೆ ಕೋಟಾ, ಗಂಗ ಕಲ್ಯಾಣ, ಸ್ವಯಂ ಉದ್ಯೋಗ ಸೇರಿದಂತೆ ನಿಗಮದಲ್ಲಿರುವ ಯೋಜನೆಗಳ ಫಲಾನುಭವಿಗಳ ಆಯ್ಕೆ ಮಿತಿಯನ್ನು ಹೆಚ್ಚಿಸಬೇಕು ಮತ್ತು ನೀಡಲಾಗುವ ಸಾಲಗಳ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

emedialine

Recent Posts

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 mins ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 mins ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

10 mins ago

ಸುರಪುರ:ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ಪೂರ್ವಭಾವಿ ಸಭೆ

ಸುರಪುರ: ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ನಗರದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ…

28 mins ago

ಕೃಷಿ ಇಲಾಖೆ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ

ಸುರಪುರ: ನಮ್ಮ ಸರಕಾರ ರೈತರಿಗಾಗಿ ಹಲವಾರು ಯೋಜನೆಗಳನ್ನು ಜೊರಿಗೊಳಿಸಿದ್ದು ರೈತರು ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳ ಬೇಕು ಎಂದು ಶಾಸಕ…

30 mins ago

ವಿದ್ಯಾರ್ಥಿನಿಯರಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಸೈಕಲ್‍ ವಿತರಣೆ

ಕಲಬುರಗಿ: ನಗರದ ಎನ್.ವಿ ಸಂಸ್ಥೆಯ ಸತ್ಯಪ್ರಮೋದತೀರ್ಥ ಸಭಾಂಗಣದಲ್ಲಿ ಎನ್.ವಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಗುಲಬರ್ಗ ನಾರ್ಥವತಿಯಿಂದ ವಿದ್ಯಾರ್ಥಿನಿಯರಿಗೆ…

36 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420