ನಕಲಿ ವಂಶಾವಳಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಿ

ಸುರಪುರ: ತಾಲೂಕಿನ ನಾಗರಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಗ್ರಾಮ ಲೇಖಪಾಲಕರು ಹಾಗೂ ಕಕ್ಕೇರಾ ಕಂದಾಯ ನಿರೀಕ್ಷಕರು ಸೇರಿ ನಕಲಿ ವಂಶಾವಳಿ ಪ್ರಮಾಣ ಪತ್ರ ನೀಡಿದ್ದು ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಧ್ವನಿ ಸಂಘಟನೆ ಮುಖಂಡರು ಒತ್ತಾಯಿಸಿದರು.

ನಗರದ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಕೆ.ವಿಜಯಕುಮಾರಗೆ ಮನವಿ ಸಲ್ಲಿಸಿ ಸಂಘದ ಜಿಲ್ಲಾಧ್ಯಕ್ಷ ಸಂಜೀವಪ್ಪ ದರಬಾರಿ ಮಾತನಾಡಿ,ಆಲ್ದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗರಾಳ ಗ್ರಾಮದಲ್ಲಿ ಮದನಸಾಬ ಎನ್ನುವ ವ್ಯಕ್ತಿಗೆ ಗ್ರಾಮ ಲೇಖಪಾಕರು ಹಾಗೂ ಕಕ್ಕೇರಾ ಕಂದಾಯ ನಿರೀಕ್ಷಕರು ಸೇರಿ ಮದನಸಾಬ್‍ಗೆ ಇಬ್ಬರು ತಂಗಿಯರಿದ್ದರು ಅವರ ಹೆಸರನ್ನು ವಂಶಾವಳಿಯಲ್ಲಿ ಸೇರ್ಪಡೆ ಮಾಡದೆ ಮೋಸ ಮಾಡಿದ್ದಾರೆ,ವಂಶಾವಳಿ ನೀಡುವ ನಿಯಮವನ್ನು ಪಾಲನೆ ಮಾಡದೆ ಅಕ್ರಮ ಎಸಗಿದ್ದಾರೆ,ಗ್ರಾಮಕ್ಕೆ ಬಂದು ಪಂಚನಾಮೆ ಮಾಡದೆ,ಪರಿಶೀಲನೆ ಮಾಡದೆ ಯಾವುದೇ ಸರಿಯಾದ ಮಾಹಿತಿ ಇಲ್ಲದೆ ಖೊಟ್ಟಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ,ಆದ್ದರಿಂದ ಇಂತಹ ನಕಲಿ ವಂಶಾವಳಿ ಪತ್ರ ನೀಡಿರುವ ಗ್ರಾಮ ಲೇಖಪಾಲಕರು ಮತ್ತು ಕಕ್ಕೇರಾ ಕಂದಾಯ ನಿರೀಕ್ಷಕರನ್ನು ಸೇವೆಯಿಂದ ವಜಾಗೊಳಿಸಬೇಕು,ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಪ್ರತಿಭನಟೆಯನ್ನು ನಡೆಸಲಾಗುವುದು ಎಂದು ತಿಳಿಸಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರ್ ಕೆ.ವಿಜಯಕುಮಾರ ಅವರು ನಿಮ್ಮ ಮನವಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಉಪಾಧ್ಯಕ್ಷ ಶಾಂತು ತಳವಾರಗೇರ,ಶರಣಪ್ಪ ಕೆಂಭಾವಿ,ರಾಘವೇಂದ್ರ ಸುರಪುರ ಸೇರಿದಂತೆ ಇತರರಿದ್ದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420