ಭಾರತೀಯರಿಗೆ ಸಂವಿಧಾನವೇ ಪವಿತ್ರ ಗ್ರಂಥ

ಶಹಾಬಾದ: ದೇಶದಲ್ಲಿ ಆಯಾ ಧರ್ಮದವರಿಗೆ ಅವರಿಗೆ ಆದ ಧರ್ಮಗ್ರಂಥವಿದ್ದರೇ, ಭಾರತೀಯರಿಗೆ ಸಂವಿಧಾನವೇ ಪವಿತ್ರ ಗ್ರಂಥ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹೇಳಿದರು.
ಅವರು ಬುಧವಾರ ನಗರಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ಸ್ಥಭ್ಧ ಚಿತ್ರ ವಾಹನಕ್ಕೆ ಅದ್ದೂರಿ ಸ್ವಾಗತ ಕೋರಿ, ನಂತರ ನಗರದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆಣ್ಣನ್ನು ಯಾವುದೇ ಸ್ವಾಂತ್ರ್ಯ ನೀಡದೇ ಅವಳನ್ನು ಭೋಗದ ವಸ್ತುವಾಗಿ, ದಾಸಿಯಾಗಿ, ಮಕ್ಕಳು ಹಡೆಯುವ ಯಂತ್ರವಾಗಿ ಕಾಣುತ್ತಿದ್ದರು.ಆದರೆ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ಸ್ತ್ರೀಯರಿಗೆ ಸಮಾನತೆ ನೀಡುವ ನಿಟ್ಟಿನಲ್ಲಿ ಸಂವಿಧಾನದಲ್ಲಿ ಕಾನೂನುನನ್ನು ತಂದರು.ಅದರಿಂದಲೇ ಇಂದಿರಾಗಾಂಧಿ 17 ವರ್ಷ ಪ್ರಧಾನಿಯಾಗಿದ್ದು, ದ್ರೌಪಧಿ ಮುರ್ಮು ರಾಷ್ಟ್ರತಿಯಾಗಿದ್ದು ಸಂವಿಧಾನದಿಂದ.

ಇಂದು ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬರುತ್ತಿದೆ.ಅಲ್ಲದೇ ಇಂದು ರಾಮಮಂದಿರ ನಿರ್ಮಾಣವಾಗಬೇಕಾದರೆ ಅದು ಕೋರ್ಟ ಆದೇಶದ ಮೂಲಕ.ಅದು ಕೂಡ ಸಂವಿಧಾನದಿಂದಲೇ ಎಂಬುದನ್ನು ಯಾರು ಮರೆಯಬಾರದು.ಆದರೆ ಇಂದಿಗೂ ಕೆಲವರು ಸಂವಿಧಾನವನ್ನು ಒಪ್ಪಲು ತಯ್ಯಾರಿಲ್ಲ.ಸಂವಿಧಾನದ ಎಲ್ಲಾ ಸವಲತ್ತು ಪಡೆದುಕೊಂಡು ಸಂವಿಧಾನ ಕೇವಲ ಒಂದು ಜಾತಿಗೆ ಸಿಮೀತವಾಗಿದೆ ಎನ್ನುವ ಕೆಟ್ಟ ಮನಸ್ಸುಗಳು ಇಂದಿಗೂ ಸಮಾಜದಲ್ಲಿ ಕಾಣುತ್ತೆವೆ.ಒಂದು ವೇಳೆ ಮೇಲ್ಜಾತಿಯ ವ್ಯಕ್ತಿ ಸಂವಿಧಾನವನ್ನು ರಚಿಸಿದ್ದರೇ ಅವರನ್ನು ದೇವರೆಂದು ಪೂಜಿಸುತ್ತಿದ್ದರು.

ಅಸ್ಪøಶ್ಯ ಎಂಬ ಕಾರಣಕ್ಕೆ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಒಂದು ಜಾತಿಗೆ ಸಿಮೀತ ಮಾಡುವುದು ಸರಿಯಲ್ಲ.ಅಂಬೇಡ್ಕರ್ ಯಾವುದೇ ಜಾತಿ, ಧರ್ಮ ಅಂಟಿಕೊಳ್ಳದೇ, ಭಾರತೀಯ ನಾಗರಿಕರಿಗೆ ಸಂವಿಧಾನ ರಚಿಸುವ ಮೂಲಕ ವಿಶ್ವದಲ್ಲಿಯೇ ಅತ್ಯಂತ ವಿಶಿಷ್ಟವಾದ ಸಂವಿಧಾನ ಎಂದು ಹೆಗ್ಗಳಿಕೆಯನ್ನು ಪಡೆದುಕೊಂಡಿದೆ ಎಂದರು.

ತಾಪಂ ಇಓ ಮಲ್ಲಿನಾಥ ರಾವೂರ ಮಾತನಾಡಿ, ಸ್ವಾತಂತ್ರ್ಯದ ನಂತರ ನಮ್ಮ ದೇಶದ ಆಡಳಿತ ಯಂತ್ರ ಹೇಗೆ ನಡೆಯಬೇಕು ಎನ್ನುವ ಸಮಗ್ರ ಗುಚ್ಚವೇ ಸಂವಿಧಾನ.ಇಂದು ಎಲ್ಲರೂ ಆನಂದದಿಂದ, ಸಂತೋಷವಾಗಿ ನಾವು ಬದುಕು ನಡೆಸುತ್ತಿದ್ದೆವೆ ಎಂದರೇ ಅದು ಸಂವಿಧಾನದಿಂದಲೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತಹಸೀಲ್ದಾರ ಜಗದೀಶ.ಎಸ್.ಚೌರ್ ಮಾತನಾಡಿ,ನಮ್ಮ ದೇಶವೂ ಸಂವಿಧಾನದ ಆಶಯದ ಮೇಲೆ ನಡೆಯುತ್ತಿದೆ.ಸಂವಿಧಾನದ ಮಹತ್ವ ಮತ್ತು ಮೌಲ್ಯವನ್ನು ಪ್ರತಿಯೊಬ್ಬರೂ ಅರಿವನ್ನು ಹೊಂದಬೇಕು.ಸಂವಿಧಾನದ ಚೌಕಟ್ಟಿನಲ್ಲಿ ಎಲ್ಲರೂ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

ನಗರಸಭೆಯ ಪೌರಾಯುಕ್ತೆ ಪಂಕಜಾ ರಾವೂರ, ದಸಂಸ ಮುಖಂಡರಾದ ಕೃಷ್ಣಪ್ಪ ಕರಣಿಕ್, ಬಸವರಾಜ ಮಯೂರ,ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ, ನಗರಸಭೆಯ ಸದಸ್ಯರಾದ ನಾಗರಾಜ ಕರಣಿಕ್,ಸಾಬೇರಾಬೇಗಂ, ಸಿಡಿಪಿಓ ವಿಜಯಲಕ್ಷ್ಮಿ ಹೇರೂರ್, ಸಮಾಜ ಕಲ್ಯಾಣ ಇಲಾಖೆಯ ರವಿಕುಮಾರ ಮುತ್ತಗಿ, ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ, ಹಣಮಂತರಾವ ಪಾಟೀಲ ಸೇರಿದಂತೆ ಅನೇಕರು ಇದ್ದರು.

ಇದೇ ಸಂದರ್ಭದಲ್ಲಿ ನಗರದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಅದ್ದೂರಿ ಮೆರವಣಿಗೆ ನಡೆಯಿತು.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

3 mins ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

43 mins ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

14 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

17 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

21 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420