ಕಲಬುರಗಿ: ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಪುರಷ್ಕøತ ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ.ಪಾಟೀಲ ಅವರಿಗೆ ನಗರದ ಎಂ.ಜಿ.ರೋಡ್ ಕ್ರಾಸ್ ಸಮೀಪವಿರುವ ‘ಅಹ್ಸಾನ್ ಡಿಸೈನ್ ಸ್ಟುಡಿಯೋ’ದಲ್ಲಿ ‘ಇಂಡಿಯನ್ ರಾಯಲ್ ಅಕಾಡೆಮಿ ಆಫ್ ಆರ್ಟ್ & ಕಲ್ಚರ್’ ಮತ್ತು ‘ನೀಲಾ ಆರ್ಟ್ ಸ್ಟುಡಿಯೋ’ ಮತ್ತು ಚಿತ್ರ ಕಲಾವಿದರ ಬಳಗದ ವತಿಯಿಂದ ಗುರುವಾರ ಸಂಜೆ ಸತ್ಕರಿಸಿ ಅಭಿನಂದಿಸಲಾಯಿತು.
ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದರಾದ ಡಾ.ಸುಬ್ಬಯ್ಯ ಎಂ.ನೀಲಾ ಮತ್ತು ಡಾ.ರೆಹಮಾನ್ ಪಟೇಲ್ ಮಾತನಾಡಿ, ಎಚ್.ಬಿ.ಪಾಟೀಲ ಅವರಿಗೆ ಈ ಪ್ರಶಸ್ತಿ ದೊರಕಿರುವುದು ಅತ್ಯಂತ ಸೂಕ್ತವಾಗಿದೆ. ನಿರಂತರವಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅವರನ್ನು ಆಯ್ಕೆ ಮಾಡಿದ ಸಂಸ್ಥೆಯು ಕೂಡಾ ಅಭಿನಂದನಗೆ ಪಾತ್ರವಾಗುತ್ತದೆ. ಪಾಟೀಲ ಅವರಂತಹ ನಿಸ್ವಾರ್ಥ ಸಮಾಜ ಸೇವಕರ ಸಂಖ್ಯೆ ಪ್ರಸ್ತುತ ಸಂದರ್ಭದಲ್ಲಿ ಹೆಚ್ಚಾಗಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಿವಯೋಗೆಪ್ಪಾ ಎಸ್.ಬಿರಾದಾರ, ಸೈಯದ್ ಮುಸ್ತಫಾ, ಶೇಖ್ ಅಹ್ಸನ್, ಶೇಖ್ ಇಮ್ರಾನ್, ಮೊಹಮ್ಮದ್ ಯೂಸುಫ್ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…