ಬಿಸಿ ಬಿಸಿ ಸುದ್ದಿ

ತಿಪಣ್ಣಪ್ಪ ಕಮಕನೂರ್ ಅವರ ನಿರ್ಣಯ ಏಕ ಪಕ್ಷೀಯವಾಗಿದೆ; ಸಾಲಿ

ಚಿತ್ತಾಪುರ; ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಅವರು ಕೋಲಿ ಸಮಾಜದ ಮುಖಂಡರೊಂದಿಗೆ ಚರ್ಚಿಸದೇ ಏಕಾಏಕಿ ಕೋಲಿ ಸಮಾಜದ ಸಮಾವೇಶ ಆಯೋಜಿರುವುದು ಸಮಂಜಸವಲ್ಲ ಎಂದು ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ಹೇಳಿದರು.

ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಫೆ. 25ರಂದು ಕೋಲಿ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ನಿರ್ಣಯ ಏಕ ಪಕ್ಷೀಯವಾಗಿದೆ. ಇದನ್ನು ತಾಲೂಕು ಕೋಲಿ ಸಮಾಜ ಖಂಡಿಸುತ್ತದೆ ಎಂದರು.

ಈ ಕಾರ್ಯಕ್ರಮದ ಹಿಂದೆ ಕಮಕನೂರ ಅವರ ಸ್ವಾರ್ಥಕ್ಕಾಗಿ. ಹೀಗಾಗಿ ಚಿತ್ತಾಪುರ ಕೋಲಿ ಸಮಾಜದವರು ಈ ಸಮಾವೇಶಕ್ಕೆ ಬಹಿಷ್ಕಾರ ಹಾಕಲು ನಿರ್ಣಯ ಕೈಗೊಂಡಿದ್ದಾರೆ ಎಂದರು.

ಜಿಲ್ಲೆಯಲ್ಲಿ ಅಧಿಕ ಸಂಖ್ಯೆಯಲ್ಲಿರುವ ಕೋಲಿ ಸಮಾಜದ ಕೋಟಾದಡಿ ಕಮಕನೂರ ಅವರಿಗೆ ಎಂಎಲ್‌ಸಿ ಮಾಡಲಾಗಿದೆ ಹೊರತು ಅವರ ವೈಯಕ್ತಿಕ ವರ್ಚಿಸ್ಸಿನಿಂದ ಅಲ್ಲ‌. ಸಮಾಜದ ಹೆಸರಿನಲ್ಲಿ ಎಂಎಲ್‌ಸಿ ಸ್ಥಾನ ಪಡೆದ ಕಮಕನೂರ ಸಮಾಜವನ್ನು ಒಗ್ಗೂಡಿಸುವ ಕೆಲಸವನ್ನು ಮಾಡುವುದನ್ನು ಬಿಟ್ಟು ತಮ್ಮ ಸ್ವಾರ್ಥಕ್ಕೆ ಬಳಸಿ ಕೊಂಡು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕೋಲಿ ಸಮಾಜದ ಮುಖಂಡ ಮಲ್ಲಿಕಾರ್ಜುನ ಎಮ್ಮೆನೋರ,
ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನರ್, ಬಸವರಾಜ
ಚಿನ್ನಮಳ್ಳಿ, ಸುರೇಶ ಬೆನಕನಳ್ಳಿ, ಗುರುನಾಥ ಗುದಗಲ್, ಬಸಣ್ಣ ತಳವಾರ, ಶರಣು ಸಿದ್ರಾಮಗೋಳ, ನಾಗೇಂದ್ರ ಜೈಗಂಗಾ, ತಮ್ಮಣ್ಣ ಡಿಗ್ಗಿ, ಮುನಿಯಪ್ಪ ಕೊಳ್ಳಿ, ಶಿವಕುಮಾರ ಯಾಗಾಪೂರ, ಕರಣಕುಮಾರ ಅಲ್ಲೂರ, ನಿಂಗಣ್ಣ ಹೆಗಲೇರಿ, ದಶರಥ ದೊಡ್ಡಮನಿ, ಭೀಮರಾಯ ಹೊತಿನಮಡಿ, ಲಕ್ಷ್ಮೀಕಾಂತ ಸಾಲಿ, ವೆಂಕಟರಮಣ ಬೇವಿನಗಿಡ, ಮಹಾದೇವ ಮುಗುಟಿ, ಮಲ್ಲಿಕಾರ್ಜುನ ಸಂಗಾವಿ, ಚಂದ್ರು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago