ಕಲಬುರಗಿ: ಯುವ ಪ್ರೇಮಿಗಳಿಬ್ಬರು ನೇಣು ಬಿಗಿದ್ದುಕೊಂಡ ಆತ್ಮಹತ್ಯೆ

0
26

ಕಲಬುರಗಿ: ವರಸೆಯಲ್ಲಿ ಅಣ್ಣ ತಂಗಿಯಾದ ಪ್ರೇಮಿಗಳಿಬ್ಬರು ಮದುವೆಯಾಗಿದ ನಂತರ ಸೇಲ್ಫಿತೆಗೆದುಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರ ಗ್ರಾಮದಲ್ಲಿ ನಡೆದಿದೆ.

ಗೊಲ್ಲಾಳ್ (24) ಹಾಗೂ ಶಶಿಕಲಾ (18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಹಲವು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ವರಸೆಯಲ್ಲಿ ಅಣ್ಣ ತಞಮಗಿ ಆಗಿರುವ ಕಾರಣ ಮದುವೆಗೆ ಕುಟುಂಬದಿಂದ ವಿರುದ್ಧ ವ್ಯಕ್ತವಾಗಿತ್ತು.

Contact Your\'s Advertisement; 9902492681

ಕೆಲವುದಿನಗಳ ಹಿಂದೆ ಶಶಿಕಲ ಅವರ ನಿಶ್ಚಿತಾರ್ಥ ಆಗಿತ್ತು. ಮದುವೆಗೆ ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಹೊರವಲದಲ್ಲಿ ಮಂದಿರದಲ್ಲಿ ರಾತ್ರೋರಾತ್ರಿ ಮದುವೆ ಮಾಡಿಕೊಂಡು ಗ್ರಾಮದ ಹೊರವಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಯಡ್ರಾಮಿ ಪೋಲಿಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here