ಕಲಬುರಗಿ: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಹಾಗೂ ಅಜಯಕುಮಾರ್ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ನಗರದ ಸುಲ್ತಾನ್ ಪುರ್ ರಸ್ತೆಯಲ್ಲಿರುವ ಅಕ್ಷರಧಾಮ ಇಂಗ್ಲಿಷ್ ಮೀಡಿಯಂ ಶಾಲೆಯ ಆವರಣದಲ್ಲಿ ಬ್ಲಾಕ್ ಬೆಲ್ಟ್ ಹಾಗೂ ಕಲರ್ ಬೆಲ್ಟ್ ಎಕ್ಸಾಮ್ ಏರ್ಪಡಿಸಲಾಯಿತು.
ಈ ಸಂದರ್ಭದಲ್ಲಿ ಸುಲ್ತಾನ್ಪುರದ ಸಿಆರ್ಪಿ ಜಗನ್ನಾಥ್ ಬಡಿಗೇರ್ ಅವರು ಮಾತನಾಡಿ ಆತ್ಮ ರಕ್ಷಣೆ ಕಲೆಯು ವಿದ್ಯಾರ್ಥಿಗಳಿಗೆ ಅತ್ಯಾಶಕ ಎಂದು ಹೇಳಿದರು.
ಅಕ್ಷರಧಾಮ ಶಾಲೆಯ ಮುಖ್ಯ ಗುರುಗಳಾದ ಕವಿತಾ ಸಿ ಅವರು ಕರಾಟೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಆತ್ಮ ರಕ್ಷಣ ಕಲೆವು ಹೆಣ್ಣು ಮಕ್ಕಳಿಗೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಬೆಂಗಳೂರಿನಿಂದ ಆಗಮಿಸಿದ ಮಾಸ್ಟರ್ ಶ್ರೀನಿವಾಸ್ ರವರು ವಿದ್ಯಾರ್ಥಿಗಳ ಪರೀಕ್ಷೆಯನ್ನು ವೀಕ್ಷಿಸಿ ಆರು ಜನ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಹಾಗೂ ಅನೇಕ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಡಿಸ್ಟ್ರಿಕ್ಟ್ ಚೀಫ್ ಕೋಚ್ ರಾಜವರ್ಧನ್ ಜಿ ಚೌಹಾಣ್, ಶ್ರೀಕಾಂತ್ ಪೀಸಾಳ, ಅಂಬರೀಶ್ ಜೋಗಿ, ಪ್ರತಾಪ್ ಸಿಂಗ್ ಪವರ್ ಸುಶ್ಮಿತಾ ರೆಡ್ಡಿ, ದತ್ತಾತ್ರೇಯ, ಸುಪ್ರಿಯಾ, ಪ್ರೇಮ್ ಕುಮಾರ್, ಗಾಯತ್ರಿ ಸಾವಳಿ, ಮಹದೇವ್, ಅನಿಲಕುಮಾರ್, ಸಿದ್ದು, ತೇಜಸ್ ಹಾಗೂ ಅನೇಕ ಕರಾಟೆ ವಿದ್ಯಾರ್ಥಿಗಳು ಪೆÇೀಷಕರು ಉಪಸ್ಥಿತರಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…