ಶಹಾಬಾದ: ನಗರದ ಅಂಬೇಡ್ಕರ್ ವೃತ್ತದಲ್ಲಿ ಫೆ.5 ರಂದು ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಕಾಂಗ್ರೆಸ್ ಮುಖಂಡ ರಾಜಕುಮಾರ. ಹೆಚ್.ಕಪನೂರ್ ಅವರ 45ನೇ ಜನ್ಮ ದಿನದ ನಿಮಿತ್ತ ಅವರ ಅಭಿಮಾನಿ ಬಳಗದ ವತಿಯಿಂದ ಹುಟ್ಟು ಹಬ್ಬ ಆಚರಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜಕುಮಾರ.ಹೆಚ್.ಕಪನೂರ್ ಅಭಿಮಾನಿ ಬಳಗದ ರಾಜು ನಾಟೇಕಾರ ಹಾಗೂ ಪರಶುರಾಮ ಚಲುವಾದಿ ಪ್ರಟಣೆಯಲ್ಲಿ ತಿಳಿಸಿದ್ದಾರೆ.