ಕಲಬುರಗಿ: ಹೈ.ಕ.ಶಿ. ಸಂಸ್ಥೆಯ ಎಂ. ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಹೈ.ಕ. ಶಿ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಲಿಂ. ಶ್ರೀ ಮಹಾದೇವಪ್ಪ ರಾಂಪೂರೆ ಯವರ 51 ನೇಯ ಪುಣ್ಯಸ್ಮರಣೆ ನಿಮಿತ್ಯ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ರಾ. ಸೇ. ಯೋಜನೆ ಘಟಕ, ಯುತ್ ರೆಡ್ ಕ್ರಾಸ್ ಘಟಕ ಹಾಗು ರೆಡ್ ರಿಬ್ಬನ್ ಕ್ಲಬ್ನ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಯಿತು.
ಈ ರಕ್ತದಾನ ಶಿಬಿರವನ್ನು ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಜಶೇಖರ ಪಾಟೀಲ ಉದ್ಘಾಟಿಸಿ ರಕ್ತದಾನದ ಮಹತ್ವವನ್ನು ಕುರಿತು ಮಾತನಾಡಿದರು. ಬಸವೇಶ್ವರ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಅಧಿಕಾರಿಯಾದ ಡಾ. ಶಿವಶೆಟ್ಟಿ ಅವರು ಮಾತನಾಡಿ ರಕ್ತದಾನ ಮಾಡುವದರಿಂದ ಅರೋಗ್ಯವನ್ನು ಕಾಪಾಡಿಕೊಳ್ಳ ಬಹುದೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷೀಯ ನುಡಿಗಳನ್ನಾಡಿದ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜಶೇಖರ ಬೀರನಳ್ಳಿ ಅವರು ಒಳ್ಳೆಯ ಆಹಾರ ಸೇವನೆ ಸೇವನೆ ಮಾಡುವುದರ ಜೊತೆಗೆ ಸಮಾಜ ಸೇವೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಹೇಳಿದರು.
ಯುತ್ ರೆಡ್ ಕ್ರಾಸ್ ಹಾಗೂ ರಾ. ಸೇ. ಯೋಜನೆ ಕಾರ್ಯಕ್ರಮಾಧಿಕಾರಿಯಾದ ಡಾ. ಪ್ರಾಣೇಶ ಎಸ್ ಕಾಯ್ರಕ್ರಮದ ನಿರ್ವಹಣೆಯನ್ನು ಮಾಡಿದರು. ಡಾ.ಶಂಕ್ರಪ್ಪ ಕೆ ಸ್ವಾಗತಿಸಿದರು. ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೆತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…