ಸಮಾಜ ಕಲ್ಯಾಣ ಸಚಿವಗೆ ಡಿಎಸ್‍ಎಸ್ ಮುಖಂಡರ ಭೇಟಿ ತಾಲೂಕಿಗೆ ಸೌಲಭ್ಯಕ್ಕೆ ಮನವಿ

0
12

ಸುರಪುರ: ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹಾದೇವಪ್ಪಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಜಿ ಸಾಗರ ಬಣದ ಜಿಲ್ಲಾ ಮತ್ತು ತಾಲೂಕು ಘಟಕದ ಮುಖಂಡರು ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ ಸುರಪುರ ತಾಲೂಕಿಗೆ ವಿವಿಧ ಸೌಲಭ್ಯಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ.

ತಾಲೂಕಿನಲ್ಲಿ ಪರಿಶಿಷ್ಟ ಸಮುದಾಯದ ನಿರುದ್ಯೋಗಿ ಯುವಕರಿಗೆ ಯುವಕರಿಗೆ ಉದ್ಯೋಗವನ್ನು ನೀಡಬೇಕು ಅಥವಾ ಸ್ವಂತ ಉದ್ಯೋಗಕ್ಕಾಗಿ ಬಾಡಿಗೆ ವಾಹನಗಳ ಖರಿದಿಗೆ ಸಹಾಯ ಧನ ನೀಡಬೇಕು,ತಾಲೂಕಿನ ಅನೇಕ ಗ್ರಾಮಗಳಲ್ಲಿ ಡಾ:ಬಿ.ಆರ್ ಅಂಬೇಡ್ಕರ್ ಸಮುದಾಯ ಭವನಗಳನ್ನು ಮಂಜೂರು ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

Contact Your\'s Advertisement; 9902492681

ಮನವಿ ಸ್ವೀಕರಿಸಿದ ಸಚಿವರು ತಮ್ಮ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಒಂದೊಂದಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ,ತಿಪ್ಪಣ್ಣ ಶೆಳ್ಳಗಿ,ಶೇಖರ ಮಂಗಳೂರು,ರಾಜು ಬಡಿಗೇರ,ಭೀಮರಾಯ ಮಂಗಳೂರು,ತಿಮ್ಮಣ್ಣ ದೇವದುರ್ಗ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here