ಸಮಾಜ ಕಲ್ಯಾಣ ಇಲಾಖೆಯಿಂದ ಅಸ್ಪøಷ್ಯತೆ ನಿವಾರಣೆ ಜಾಗೃತಿ ಕಾರ್ಯಕ್ರಮ

0
8

ಸುರಪುರ: ತಾಲೂಕಿನಲ್ಲಿ ಅಸ್ಪøಷ್ಯತೆ ನಿವಾರಣೆ ಕುರಿತು ಸಮಾಜ ಕಲ್ಯಾಣ ಇಲಾಖೆಯಿಂದ ಬೀದಿ ನಾಟಕದ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಹಸಿಲ್ದಾರ್ ಕೆ.ವಿಜಯಕುಮಾರ ತಿಳಿಸಿದರು.

ಈ ಕುರಿತು ಮಾದ್ಯಮಗಳಿಗೆ ಹೇಳಿಕೆ ನೀಡಿರುವ ತಹಸಿಲ್ದಾರರು ಇದೇ ಫೆಬ್ರವರಿ 16 ನೇ ತಾರಿಕು ದೇವರಗೋನಾಲ ಗ್ರಾಮದಲ್ಲಿ ಹಾಗೂ 17ನೇ ತಾರಿಕು ದೇವಿಕೇರಾ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

Contact Your\'s Advertisement; 9902492681

ನಾಗರಿಕ ಸಂರಕ್ಷಣಾ ಅಧಿನಿಯಮ 1955 ಹಾಗೂ ಪ.ಜಾ,ಪ.ಪಂ,ವರ್ಗ ಪ್ರತಿಬಂಧ ಅಧಿನಿಯಮ 1989ರ ಅಡಿಯಲ್ಲಿ ವಿಚಾರ ಗೋಷ್ಠಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸರಕಾರದ ಆದೇಶದ ಅಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here