ಜೇವರ್ಗಿ: ನಗರದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ವಾರ್ಷಿಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಡಿಸೆಂಬರ್ 8ರಂದು ಸಾಯಂಕಾಲ 5 ಗಂಟೆಗೆ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.
ಪೂಜ್ಯಶ್ರೀ ಜಗದ್ಗುರು ಲಿಂಗೈಕೆ ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳವರ ದಿವ್ಯ ಪ್ರಕಾಶದಲ್ಲಿ ಪೂಜ್ಯಶ್ರೀ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠ ಯಡಿಯೂರು ಡಂಬಳ ಗದಗ ಇವರ ಕೃಪಾ ಆಶೀರ್ವಾದದೊಂದಿಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಜ್ಯಶ್ರೀ ಕೊರಣೇಶ್ವರ ಮಹಾಸ್ವಾಮಿಗಳು ತೋಂಟದಾರ್ಯ ಅನುಭವ ಮಂಟಪ ಆಳಂದ ಭಾಗವಹಿಸಲಿದ್ದು, ಉದ್ಘಾಟಕರಾಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಮಪ್ರಭು ಪಾಟೀಲ, ಮುಖ್ಯ ಅತಿಥಿಗಳಾಗಿ ಗುಲ್ಬರ್ಗ ವಿಶ್ವವಿದ್ಯಾಲಯ ಕುಲಸಚಿವ ಡಾ. ಬಿ. ಶರಣಪ್ಪ, ಎಸ್. ಎಸ್. ಪಟ್ಟಣಶೆಟ್ಟರ್, ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮದರ್ ಖಾನ್ ಪಠಾಣ, ಜೇವರ್ಗಿ ಪುರಸಭೆ ಮುಖ್ಯ ಅಧಿಕಾರಿ ಶಂಭುಲಿಂಗ ದೇಸಾಯಿ, ಖ್ಯಾತ ಗಣಕ ವಿಜ್ಞಾನಿ, ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಡಿಜೈನ ವಿಭಾಗದ ಪ್ರೊಫೆಸರ್ ವಿಜಯಕುಮಾರ್ ಮಾಲಗಿತ್ತಿ ಭಾಗವಹಿಸಲಿದ್ದಾರೆ ಎಂದು ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಸ್ಥಾನಿಕ ಉಪಾಧ್ಯಕ್ಷರಾದ ಶಿವನಗೌಡ ಪಾಟೀಲ ಹಂಗರಗಿ ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…