ಪ್ಯಾಕೇಜ್ ಪದ್ಧತಿ ಟೆಂಡರ್ ಕಾಮಗಾರಿಗೆ ಗುತ್ತಿಗೆದಾರರ ಸಂಘದ ವಿರೋಧ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಟೆಂಡರ್ ಕಾಮಗಾರಿಗಳನ್ನು ಪ್ಯಾಕೇಜ್ ಪದ್ದತಿಯಡಿ ಕರೆಯುವುದನ್ನು ಹಾಗೂ ಭೂ ಸೇನಾ ನಿಗಮಕ್ಕೆ ಕಾಮಗಾರಿಗಳನ್ನು ವಹಿಸುವುದನ್ನು ಕೈಬಿಡಬೇಕು ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ್ ಶೇಗಜಿ ಅವರು ಒತ್ತಾಯಿಸಿದರು.

ನಗರದಲ್ಲಿ ಯಾತ್ರಿಕ ನಿವಾಸ್ ಹೋಟೆಲ್ ನಲ್ಲಿ ಜರುಗಿದ ಗುತ್ತಿಗೆದಾರರ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಏಳು ಜಿಲ್ಲೆಗಳು ಬರುತ್ತವೆ. ಅವುಗಳ ಅಡಿಯಲ್ಲಿ ಬರುವ ಕಾಮಗಾರಿಗಳಿಗೆ ಪ್ಯಾಕೇಜ್ ಪದ್ದತಿ ಮಾಡಬಾರದು ಎಂದು ಉಚ್ಛ ನ್ಯಾಯಾಲಯದ ಆದೇಶವಿದ್ದರೂ ಸಹ ಆದೇಶವನ್ನು ಉಲ್ಲಂಘಿಸಿ ಎಲ್ಲ ಅಧಿಕಾರಿಗಳು ಟೆಂಡರ್ ಕರೆಯುತ್ತಿದ್ದಾರೆ ಎಂದು ದೂರಿದರು.

ಉಳಿದ ಕಾಮಗಾರಿಗಳನ್ನು ಟೆಂಡರ್ ಕರೆಯದೇ ನೇರವಾಗಿ ಕೆಆರ್‍ಐಡಿಎಲ್ (ಭೂಸೇನಾ ನಿಗಮ)ಕ್ಕೆ ಕಾಮಗಾರಿಗಳನ್ನು ವಹಿಸಿದ್ದಾರೆ. ಹೀಗಾದರೆ ಕಲ್ಯಾಣ ಕರ್ನಾಟಕಕ್ಕೆ 371(ಜೆ) ಜಾರಿಯಾಗಿದ್ದರೂ ಅದನ್ನು ಅನುಷ್ಠಾನಕ್ಕೆ ತರದೇ ಅನ್ಯಾಯ ಮಾಡಲಾಗುತ್ತಿದೆ. ಅದೇ ರೀತಿ ಗುತ್ತಿಗೆದಾರರ ಯಂತ್ರೋಪಕರಣಗಳು, ಕೂಲಿ ಕಾರ್ಮಿಕರು ಕೆಲಸವಿಲ್ಲದಂತಾಗಿ ಬೀದಿ ಪಾಲಾಗುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಈ ಹಿಂದೆ ನಿರ್ವಹಿಸಿದ ಕಾಮಗಾರಿಗಳ ಬಿಲ್ ಸಹ ಆಗಿಲ್ಲ ಎಂದು ಅಸಮಾಧಾನ ಹೊರಹಾಕಿದ ಅವರು, ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಹಿಂದಿನ ಸರ್ಕಾರದ ಎಲ್ಲ ತಪ್ಪುಗಳನ್ನು ಸರಿಪಡಿಸುವ ಭರವಸೆ ನೀಡಿದ್ದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದು ಸಂತೋಷದ ಸಂಗತಿ. ಆದಾಗ್ಯೂ, ಆ ಭರವಸೆ ಇನ್ನೂ ಇತ್ಯರ್ಥವಾಗಿಲ್ಲ ಎಂದು ದೂರಿದರು.

ಮುಖ್ಯಮಂತ್ರಿಗಳು ಕೊಟ್ಟ ಭರವಸೆಯನ್ನು ಈಡೇರಿಸಬೇಕು. ಕೂಡಲೇ ಮಧ್ಯಸ್ಥಿಕೆ ವಹಿಸಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ಯಾಕೇಜ್ ಪದ್ಧತಿ ಟೆಂಡರ್ ಕಾಮಗಾರಿಗಳನ್ನು ಹಾಗೂ ಭೂಸೇನಾ ನಿಗಮಕ್ಕೆ ವಹಿಸುವ ಕಾಮಗಾರಿಗಳನ್ನು ತಡೆಯಬೇಕು ಎಂದು ಅವರು ಒತ್ತಾಯಿಸಿದರು.

ಸಭೆಯಲ್ಲಿ ಎನ್.ಎಸ್. ಮೂಲಗೆ, ಮೊಹಸಿನ್ ಎಂ. ಪಟೇಲ್, ಸಂಜಯ್ ಆರ್.ಕೆ., ಎಂ.ಕೆ. ಪಾಟೀಲ್, ರಾಜಶೇಖರ್ ಯಂಕಂಚಿ, ರಿಯಾಜುದ್ದೀನ್ ಪಟೇಲ್ ಮುಂತಾದವರು ಪಾಲ್ಗೊಂಡಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420