ಸುರಪುರ: ಸರಕಾರದ ಮಹತ್ವಾಕಾಂಕ್ಷೆಯ ಸಂವಿಧಾನ ಜಾಗೃತಿ ಜಾಥಾ ಇದೇ 16ನೇ ತಾರಿಖು ಸುರಪುರ ತಾಲೂಕಿಗೆ ಆಗಮಿಸುತ್ತಿದ್ದು,ಕಕ್ಕೇರಾ ಮೂಲಕ ಜಾಥಾ ಆರಂಭವಾಗಲಿದ್ದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಜಾಥಾ ಭೇಟಿ ನೀಡಲಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್ ತಿಳಿಸಿದರು.
ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಅಭಿವೃಧ್ಧಿ ಅಧಿಕಾರಿಗಳ ಸಹಭಾಗಿತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,16ನೇ ತಾರಿಖಿಗೆ ತಾಲೂಕಿಗೆ ಆಗಮಿಸುವ ಜಾಥಾ 23ನೇ ತಾರಿಖು ಸುರಪುರ ನಗರದಲ್ಲಿ ಸಮಾರೋಪಗೊಳ್ಳಲಿದೆ ಎಂದು ತಿಳಿಸಿ,ಪ್ರತಿ ಗ್ರಾಮ ಪಂಚಾಯತಿಗೆ ಆಗಮಿಸಿದಾಗ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬೇಕು,ಆಯಾ ಗ್ರಾಮಗಳಲ್ಲಿನ ಯುವಕರು,ಸಾರ್ವಜನಿಕರಿಂದ ಸೈಕಲ್ ಅಥವಾ ಬೈಕ್ ರ್ಯಾಲಿಯನ್ನು ಮಾಡಿಸಿ,ಜೊತೆಗೆ ಗ್ರಾಮದಲ್ಲಿ ಜಾಥಾ ನಡೆಸಿ ಸಂವಿಧಾನದ ಬಗ್ಗೆ ಎಲ್ಲರಿಗೂ ತಿಳಿಸುವ ಕಾರ್ಯ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಕೆ.ವಿಜಯಕುಮಾರ ಮಾತನಾಡಿ,ಜಾಥಾ ಯಶಸ್ವಿಗೆ ಎಲ್ಲರು ಶ್ರಮಿಸಬೇಕು,ಜಾಥಾ ಗ್ರಾಮಕ್ಕೆ ಬರುವ ಹಿಂದಿನ ದಿನ ಗ್ರಾಮದಲ್ಲಿ ಡಂಗೂರ ಸಾರಿಸಿ ಹಾಗೂ ಶಾಲಾ ಮಕ್ಕಳಿಂದ ಪ್ರಭಾತ ಪೇರಿ ನಡೆಸುವಂತೆ ತಿಳಿಸಿ,ಬಿಸಿಲು ಹೆಚ್ಚಾಗಿರುವುದರಿಂದ ಜಾಥಾದಲ್ಲಿ 6ನೇ ತರಗತಿ ನಂತರದ ಮಕ್ಕಳನ್ನು ಜಾಥಾದಲ್ಲಿ ಭಾಗವಹಿಸಲು ತಿಳಿಸಿ ಎಂದರು.ಅಲ್ಲದೆ ಜಾಥಾದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಸಂವಿಧಾನದ ಚಿಕ್ಕ ಪುಸ್ತಕಗಳನ್ನು ನೀಡುವಂತೆ ಸಲಹೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಎ.ಡಿ ಶೃತಿ ಮಾತನಾಡಿ,ಸಂವಿಧಾನ ಜಾಗೃತಿ ಜಾಥಾದ ಜೊತೆಗೆ ಸರಕಾರದ ಐದು ಗ್ಯಾಂರಂಟಿ ಯೋಜನೆಗಳ ಕುರಿತಾದ ವಾಹನವೂ ಬರುತ್ತಿದ್ದು ಸರಕಾರದ ಪಂಚ ಗ್ಯಾರಂಟಿ ಯೋಜನೆ ಬಗ್ಗೆಯೂ ತಿಳಿಸಬೇಕು ಮತ್ತು ಯಾರಾದರು ಈ ಐದು ಗ್ಯಾರಂಟಿಗಳಿಂದ ವಂಚಿತರಾಗಿದ್ದರೆ ಅಂತವರಿಗೆ ಯೋಜನೆ ಕೊಡಿಸುವ ನಿಟ್ಟಿನಲ್ಲಿ ಸಲಹೆ ನೀಡುವಂತೆ ತಿಳಿಸಿದರು.
ತಾಲೂಕಿನಾದ್ಯಂತ ಜಾಥಾ ಯಶಸ್ವಿಗೊಳಿಸಲು,ಪ್ರತಿ ಗ್ರಾಮ ಪಂಚಾಯತಿಯಲ್ಲೂ ನಡೆಯುವ ಜಾಥಾದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ,ಜಾಥಾ ಯಾವ ಗ್ರಾಮ ಪಂಚಾಯತಿಗೆ ಯಾವ ದಿನ ಬರಲಿದೆ ಎನ್ನುವುದನ್ನೂ ತಿಳಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳು ಅಭಿವೃಧ್ಧಿ ಅಧಿಕಾರಿಗಳು,ಕಾರ್ಯದರ್ಶಿಗಳು,ಬಿಲ್ ಕಲೆಕ್ಟರ್ಗಳು ಹಾಗೂ ತಾಲೂಕು ಪಂಚಾಯತಿ ಸಿಬ್ಬಂದಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…