ಆಳಂದ: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಶಾಂತಲಿಂಗೇಶ್ವರ ವೀರಗಾಸೆ ಪುರವಂತಿಕೆ ಜಾನಪದ ಕಲಾ ಸಂಘ ಸುಂಟನೂರ ಜಂಟಿಯಾಗಿ ಮಂಗಳವಾರ ಆಳಂದ ತಾಲೂಕಿನ ಗಡಿಗ್ರಾಮ ಖಜೂರಿ ಗ್ರಾಮದಲ್ಲಿ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿದೆ.
ಗ್ರಾಮದ ಕರಿಬಸವೇಶ್ವರ ಮಠದ ಆವರಣದಲ್ಲಿ ಸಾಯಂಕಾಲ ೫ ಗಂಟೆಗೆ ಜರುಗುವ ಕಾರ್ಯಕ್ರಮದ ಸಾನಿಧ್ಯವನ್ನು ಮುರುಘೇಂದ್ರ ಕೋರಣೇಶ್ವರ ವಹಿಸಿಲಿದ್ದು. ಶಾಸಕ ಸುಭಾಷ್ ಆರ್ ಗುತ್ತೇದಾರ ಉದ್ಘಾಟಿಸಲಿದ್ದಾರೆ. ಜಿ. ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಜ್ಯೋತಿ ಬೆಳಗಿಸಲಿದ್ದು, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ ಸಾವಳೇಶ್ವರ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ. ಪಂ ಅಧ್ಯಕ್ಷೆ ಜಗದೇವಿ ಕೋಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೋಟ್ರೇಶ, ತಾ. ಪಂ ಸದಸ್ಯ ಶಿವಪ್ಪ ವಾರಿಕ, ವಿಎಸ್ಎಸ್ಎನ್ ಅಧ್ಯಕ್ಷ ಉದಯಕುಮಾರ ಕಂದಗೂಳೆ, ಅಶೋಕ ಹೊಸಮನಿ, ಭೀಮರಾವ ಢಗೆ, ಕರಬಸಪ್ಪ ಸುಲ್ತಾನಪುರೆ, ಬಾಬು ಚಂಗಳೆ, ಮಲ್ಲಿನಾಥ ಅವುಟೆ, ಶರಣಪ್ಪ ಢಗೆ, ಶ್ರೀಶೈಲ ಬಂಡೆ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕಲಾವಿದರಾದ ಗುರುಶಾಂತಯ್ಯ ಸ್ಥಾವರಮಠ, ಸೂರ್ಯಕಾಂತ ಶಾಸ್ತ್ರೀ, ಕಲ್ಲಿನಾಥ ಶಾಸ್ತ್ರೀ, ಗುರುಲಿಂಗಯ್ಯ ಸ್ವಾಮಿ ವಾಡಿ, ಪವಿತ್ರಾ ಸ್ಥಾವರಮಠ, ಶಿವಶರಣಯ್ಯ ಮಠ, ರಾಚಯ್ಯಸ್ವಾಮಿ ರಠಕಲ್, ಚೆನ್ನಯ್ಯಸ್ವಾಮಿ ಮಠ, ಶ್ರೀದೇವಿ ಬಟಗೇರಿ, ಮಂಗಲಾಬಾಯಿ ಕಾರಭಾರಿ, ವಿಠಲರಾವ ನಾಯ್ಕೋಡಿ, ಶರಣಬಸಪ್ಪ ಬಿಲಗುಂದಿ, ಶರಣಬಸಪ್ಪ ಕಟ್ಟಿಮನಿ, ಸಂಜೀವನ ದೇಶಮುಖ, ಸುಧಾಕರ ಭೋಸಗಾ, ಶಿವಶರಣಯ್ಯ ಬೀದಿಮನಿ, ಸೋಮಯ್ಯ ಹಿರೇಮಠ, ವೀರಭದ್ರಯ್ಯ ಸ್ಥಾವರಮಠ, ಜಗದೀಶ ಹೂಗಾರ ಮೌನೇಶ ಪಂಚಾಳ, ಅಶೋಕ ಆಳಂದ, ಬಸವರಾಜ ಆಳಂದ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…