ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ಹಿನ್ನೆಲೆ: ಸಭೆಯಲ್ಲಿ ಗದ್ದಲ

0
98

ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ವೀರಶೈವ-ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಚುನಾವಣೆಗೆ ಸಂಬಂಧಿಸಿದಂತೆ ಕರೆದ ಸಭೆಯಲ್ಲಿ ಭಾರೀ ಗದ್ದಲ ಉಂಟಾಯಿತು ಎಂದು ತಿಳಿದು ಬಂದಿದೆ.

ಇದೇ ಸೆ.೨೮ ರಂದು ಜಿಲ್ಲಾ ಘಟಕಗಳ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಗಾಗಿ ವೀರಶೈವ ಮಹಾಸಭೆಯ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ಆಯೋಜಿಸಲಾಗಿತ್ತು. ಈ ವೇಳೆಯಲ್ಲಿ ಮಹಾಸಭೆಯ ಕಾರ್ಯವೈಖರಿ, ಹಣಕಾಸು ವಿಷಯ ಇತ್ಯಾದಿಗಳಿಗೆ ಸಂಬಂಧಿಸಿದಂತೆ ತೀವ್ರ ಆಕ್ಷೇಪಗಳು ಕೇಳಿ ಬಂದವು ಎನ್ನಲಾಗಿದೆ.

Contact Your\'s Advertisement; 9902492681

ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಹಲವು ಜನರು ಉತ್ಸುಕರಾಗಿದ್ದು, ಕೆಲವು ಉಮೇದುವಾರು ಆಕಾಂಕ್ಷಿಗಳು ಭಾಗವಹಿಸಿದ್ದರು ಎನ್ನಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here