ಹೊಸಗನ್ನಡದಲ್ಲಿ ಗಜಲ್ ಪರಂಪರೆ: ಫೆ.11 ರಂದು ವಿಚಾರ ಸಂಕಿರಣ

ಕಲಬುರಗಿ; ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ, ಕಲಬುರಗಿ ಹಾಗೂ ಕರ್ನಾಟಕ ಗಜಲ್ ಅಕಾಡೆಮಿ, ಬೆಂಗಳೂರು ಸಂಯುಕ್ತಾಶ್ರಯದಲ್ಲಿ “ಹೊಸಗನ್ನಡ ಸಾಹಿತ್ಯದಲ್ಲಿ ಗಜಲ್ ಪರಂಪರೆ’’ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಫೆಬ್ರವರಿ 11 ರಂದು ನಗರದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಗಜಲ್ ಅಕಾಡೆಮಿ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಫೆ.11 ರಂದು ಬೆಳಿಗ್ಗೆ 10.15 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, 8 ನೆಯ ಮಹಾದಾಸೋಹ ಪೀಠಾಧಿಪತಿಗಳು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ವಿದ್ಯಾಭಂಡಾರಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ದಿವ್ಯ ಸಾನ್ನಿಧ್ಯ ವಹಿಸುವರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‍ಪರ್ಸನ್ ಮಾತೋಶ್ರೀ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಗವರ್ನರ್ ಸದಸ್ಯರಾದ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ಸಾನಿಧ್ಯ ವಹಿಸುವರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಸಮಾರಂಭವನ್ನು ಉದ್ಘಾಟಿಸುವರು. ಹಿರಿಯ ಗಜಲ್‍ಕಾರರಾದ ಶ್ರೀಮತಿ ಪ್ರಭಾವತಿ ದೇಸಾಯಿ ವಿಜಯಪುರ ಮತ್ತು ಕರ್ನಾಟಕ ಗಜಲ್ ಅಕಾಡೆಮಿ ಅಧ್ಯಕ್ಷರಾದ ರಂಗಸ್ವಾಮಿ ಸಿದ್ದಯ್ಯ ಮುಖ್ಯ ಅತಿಥಿಗಳಾಗಿರುವರು. ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸುರೇಶ್ ಕುಮಾರ ನಂದಗಾಂವ ಅಧ್ಯಕ್ಷತೆ ವಹಿಸುವರು.

ನಂತರ ಮೊದಲ ಗೋಷ್ಠಿ ಗಜಲ್‍ಯಾನ ನಡೆಯಲಿದ್ದು. ಪತ್ರಕರ್ತ-ಲೇಖಕ ಮಹಿಪಾಲರೆಡ್ಡಿ ಮುನ್ನೂರ್ ಮುಖ್ಯ ಅತಿಥಿಗಳಾಗಿದ್ದು, ಕನ್ನಡದಲ್ಲಿ ಗಜಲ್ ಹೆಜ್ಜೆ ಗುರುತು ಕುರಿತು ಧಾರವಾಡದ ಹಿರಿಯ ಗಜಲ್ ಕವಯಿತ್ರಿ ನಿರ್ಮಲಾ ಶೆಟ್ಟರ್, ಹಾಗೂ ಕಲ್ಯಾಣ ಕರ್ನಾಟಕ ಗಜಲ್ ಸಾಹಿತ್ಯ ಕುರಿತು ಕೊಪ್ಪಳದ ಅಧ್ಯಾಪಕಿ, ಗಜಲ್ ಕವಯಿತ್ರಿ ಅರುಣಾ ನರೇಂದ್ರ ಉಪನ್ಯಾಸ ನೀಡುವರು. ಹಿರಿಯ ಗಜಲ್ ಕವಿಯಿತ್ರಿ ಹೇಮಲತಾ ವಸ್ತ್ರದ, ವಿಜಯಪುರ ಅಧ್ಯಕ್ಷತೆ ವಹಿಸುವರು.

ಎರಡನೇ ಗೋಷ್ಠಿಯಲ್ಲಿ ಗಜಲ್ ಸಂಭ್ರಮದಲ್ಲಿ ಗಜಲಕಾರರಿಂದ ವಾಚನ ನಡೆಯಲಿದೆ. ಹಿರಿಯ ಗಜಲ ಕವಿ ಸಿದ್ಧರಾಮ ಹೊನ್ಕಲ್ ಯಾದಗಿರಿ, ಎಸ್ ಬಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರು, ಲೇಖಕರಾದ ಡಾ.ಶ್ರೀಶೈಲ ಬಿರಾದಾರ ಮತ್ತು ಬಳ್ಳಾರಿಯ ಹಿರಿಯ ಗಜಲ ಕವಿ ಅಬ್ದುಲ್ ಹೈ.ತೋರಣಗಲ್ಲು ಮುಖ್ಯ ಅತಿಥಿಗಳಾಗಿರುವರು. ಎಸ್ ಬಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಶಿವರಾಜ ಶಾಸ್ತ್ರೀ ಹೇರೂರು ಅಧ್ಯಕ್ಷತೆ ವಹಿಸುವರು.

ಗಜಲ ಗೋಷ್ಠಿಯಲ್ಲಿ ಪ್ರಭುಲಿಂಗ ನೀಲೂರೆ, ಡಾ.ಗೀತಾ ಪಾಟೀಲ, ಪ್ರೇಮಾ ಹೂಗಾರ, ನಂರುಶಿ ಕಡೂರು, ಸುಹೇಚ ಪರಮವಾಡಿ, ರೇಖಾ ವಿ.ಕಂಪ್ಲಿ, ಡಾ.ಮಲ್ಲಿನಾಥ ತಳವಾರ, ಡಾ.ಭಾಗ್ಯವತಿ ಯಾದಗಿರಿ, ಡಿ.ಎಂ.ನದಾಫ್, ಹೆಚ್.ವೈ,ರಾಠೋಡ, ಜ್ಯೋತಿ ಬಿ.ದೇವಣಗಾಂವ, ಗಿರಿಜಾ ಮಾಲಿಪಾಟೀಲ, ರವೀಂದ್ರ ಕತ್ತಿ, ಕಪಿಲದೇವ ಚಕ್ರವರ್ತಿ, ಪಾರ್ವತಿ ಎಸ್.ಬೂದೂರು, ಶರಣಗೌಡ ಪಾಟೀಲ ಜೈನಾಪುರ, ಶಿವಲೀಲಾ ಡೆಂಗಿ, ವೆಂಕಟೇಶ ಎಂ. ಪಾಟೀಲ, ಗೌರಿ ಪಾಟೀಲ, ಗಂಗಾಧರ ಬಡಿಗೇರ, ಚೆನ್ನಬಸವ ಕೋಹಿನೂರ, ಸುವರ್ಣ ರಾಠೋಡ, ನೀಲಾ ಬಿ.ಮಲ್ಲೆ ಯಾದಗಿರಿ ಗಜಲ್ ವಾಚನ ಮಾಡುವರು.

ಸಂಜೆ 4.30 ಕ್ಕೆ ಸಮಾರೋಪ ಸಮಾರಂಭದಲ್ಲಿ ಹಿರಿಯ ಗಜಲಕಾರ ಮಹಾಂತೇಶ್ ನವಲಕಲ್ ಗಜಲ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಎಸ್ ಬಿ ಕಾಲೇಜಿನ ಕನ್ನಡ ವಿಭಾಗದ ಹಿರಿಯ ಉಪನ್ಯಾಸಕ ಡಾ. ವೆಂಕಣ್ಣ ಡೊಣ್ಣೇಗೌಡರ ಮುಖ್ಯ ಅತಿಥಿಗಳಾಗಿರುವರು. ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸುರೇಶ್ ಕುಮಾರ ನಂದಗಾಂವ ಅಧ್ಯಕ್ಷತೆ ವಹಿಸುವರು ಎಂದು ಕರ್ನಾಟಕ ಗಜಲ್ ಅಕಾಡೆಮಿ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

49 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

15 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420