ರಸ್ತೆ ನಿರ್ಮಾಣ ಮಾಡದಿದ್ದರೇ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಎಚ್ಚರಿಕೆ

ಶಹಾಬಾದ: ನಗರದ ಮುಖ್ಯ ರಸ್ತೆ ಮತ್ತು ಜೇವರ್ಗಿ ರಸ್ತೆ ಹಾಳಾಗಿ ಹೋಗಿದ್ದು, ಇದರಿಂದ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ.ಚುನಾಯಿತ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಸುಳ್ಳು ಆಶ್ವಾಸನೆ ನೀಡಿ ಜನರಿಗೆ ಯಾಮಾರಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ.

ಆದ್ದರಿಂದ ಫೆ.19 ರಂದು ನಗರದ ಬಸವೇಶ್ವರ ವೃತ್ತದಲ್ಲಿ ಪ್ರಗತಿಪರ ಸಂಘಟನೆ ಹಾಗೂ ಪ್ರಗತಿಪರ ಒಕ್ಕೂಟ ಸಮಿತಿಯಿಂದ ಬೃಹತ್ ಹೋರಾಟ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಪ್ರಗತಿಪರ ಹಾಗೂ ಪ್ರಗತಿಪರ ಒಕ್ಕೂಟ ಸಮಿತಿ ಪ್ರಮುಖ ಮುಖಂಡರು ಹಾಗೂ ದಸಂಸ ರಾಜ್ಯ ಸಂಘಟನಾ ಸಂಚಾಲಕರಾದ ಮರಿಯಪ್ಪ ಹಳ್ಳಿ ಹೇಳಿದರು.

ಅವರು ಗುರುವಾರ ಪ್ರಗತಿಪರ ಹಾಗೂ ಪ್ರಗತಿಪರ ಒಕ್ಕೂಟ ಸಮಿತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಸುಮಾರು ಎರಡು ವರ್ಷಗಳಿಂದ ಮುಖ್ಯ ರಸ್ತೆ ಹಾಳಾಗಿದೆ.ಇದೇ ರಸ್ತೆಯಿಂದ ಶಾಸಕ ಬಸವರಾಜ ಮತ್ತಿಮಡು, ಅಧಿಕಾರಿ ವರ್ಗದವರು ಬಂದು ಹೋಗುತ್ತಾರೆ. ಆದರೂ ಕಿಂಚಿತ್ತೂ ಕಾಳಜಿ ಇವರಿಗಿಲ್ಲ.

ಸಾರ್ವಜನಿಕರ ಮತ ಪಡೆದ ಜನಪ್ರತಿನಿಧಿ ಜನರಿಗೆ ಮೂಲ ಸೌಲಭ್ಯಗಳಲ್ಲಿ ಒಂದಾದ ರಸ್ತೆಯನ್ನು ನಿರ್ಮಾಣ ಮಾಡಿಕೊಡುವುದು ಆದ್ಯ ಕರ್ತವ್ಯ.ಆದರೆ ಇಲ್ಲಿನ ಜನರು ಧೂಳಿನಿಂದ ಸಂಕಷ್ಟ ಎದುರಿಸುತ್ತಿದ್ದಾರೆ.ಶಾಲಾಮಕ್ಕಳಿಗೆ,ಕೂಲಿ ಕಾರ್ಮಿಕರಿಗೆ, ನೌಕರಸ್ಥರಿಗೆ ಎಲ್ಲಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ.ಅಲ್ಲದೇ ಧೂಳಿನಿಂದ ಅಸ್ತಮಾ ರೋಗಕ್ಕೆ ಆಸ್ಪತ್ರೆಗೆ ಸೇರುವ ಸಾಧ್ಯತೆಗಳು ಹೆಚ್ಚಾಗಿವೆ.

ದಿನದಲ್ಲೇ ದೂಳಿನಿಂದ ರಾತ್ರಿಯ ಅನುಭವವಾಗುತ್ತಿದೆ.ಅಷ್ಟೊಂದ ಧೂಳು ಆವರಿಸಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.ಈ ಸಂಬಂಧ 9ನೇ ಅಕ್ಟೋಬರ್ 2023 ರಂದು ನಗರದ ಎಬಿಎಲ್ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ತಿಳಿದಾಗ ಸ್ಥಳೀಯ ಶಾಸಕ ಬಸವರಾಜ ಮತ್ತಿಮಡು 8 ಕೋಟಿ ರೂ. ಬಿಡುಗಡೆಯಾಗಿದೆ.8 ದಿನದಲ್ಲಿ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ಪತ್ರಿಕಾ ಹೇಳಿಕೆ ನೀಡಿದ್ದರು.ಆದರೆ ನಾವು ಅಂದೇ ಬೃಹತ್ ಪ್ರತಿಭಟನೆ ಮಾಡಿದಾಗ ಸೇಡಂ ಪಿಡಬ್ಲೂಡಿ ಎಇಇ ಹಾಗೂ ಕಲಬುರಗಿ ಪಿಡಬ್ಲೂಡಿ ಇಇ ಸ್ಥಳಕ್ಕೆ ಧಾವಿಸಿ ತಿಂಗಳ ಒಳಗಾಗಿ ಕಾಮಗಾರಿ ಪ್ರಾರಂಭ ಮಾಡುತ್ತೆವೆ ಎಂದು ಆಶ್ವಾಸನೆ ನೀಡಿದರು.

ಆದರೆ ಇಂದಿಗೆ ನಾಲ್ಕು ತಿಂಗಳಾದರೂ ಯಾವುದೇ ಕಾಮಗಾರಿ ಕೈಗೊಂಡಿಲ್ಲ.ಸದ್ಯ ಕೇಳಿದಾಗಲೂ ಟೆಂಡರ್ ಆಗುತ್ತದೆ ಮತ್ತು ಪ್ರಗತಿಯಲ್ಲಿದೆ ಎಂದು ಉತ್ತರ ಕೊಡುತ್ತಿದ್ದಾರೆ. ಟೆಂಡರ್ ಆದ ತಕ್ಷಣವೇ ರಸ್ತೆ ನಿರ್ಮಾಣ ಮಾಡಲಾಗುವುದೆಂದು ಹೇಳುತ್ತಾರೆ.ನಿರಂತರವಾಗಿ ಸುಳ್ಳು ಹೇಳುವ ಶಾಸಕ ಹಾಗೂ ಅಧಿಕಾರಿಗಳು ಜನರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ.ಇತ್ತ ಜಿಲ್ಲಾ ಉಸ್ತುವಾರಿ ಸಚಿವರೂ ಗಮನಹರಿಸಬೇಕು.

ತೊನಸನಹಳ್ಳಿ(ಎಸ್) ಗ್ರಾಮದಿಂದ ದಾದಿಪೀರ ದರ್ಗಾವರೆಗೆ ಡಾಂಬರೀಕರಣ ನಡೆಯುತ್ತಿದೆ.ಆದರೆ ಅಲ್ಲಿಂದ ಕನಕದಾಸ ವೃತ್ತ, ಬಸವೇಶ್ವರ ವೃತ್ತದವರೆಗೆ ರಸ್ತೆ ನಿರ್ಮಾಣ ಮಾಡುತ್ತಿಲ್ಲ ಎಂದು ಅಧಿಕಾರಿ ವರ್ಗ ಹೇಳುತ್ತಾರೆ.ಅಲ್ಲದೇ ತೊನಸನಹಳ್ಳಿಯಿಂದ ಫೀರೋಜಾಬಾದ ವೃತ್ತದವರೆಗಿನ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿಲ್ಲ. ಆದ್ದರಿಂದ ಈ ಬಾರಿ ಬೃಹತ್ ಪ್ರತಿಭಟನೆ ಕೈಗೊಳ್ಳಾಗುತ್ತಿದೆ. ಅಲ್ಲದೇ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿ ವರ್ಗದವರು ಆಗಮಿಸಿ ರಸ್ತೆ ನಿರ್ಮಾಣ ಮಾಡಿಕೊಡಬೇಕು.

ಇಲ್ಲದಿದ್ದರೇ ಮುಂಬರುವ ಲೋಕಸಭಾ ಚುನಾವಣೆಯನ್ನು ಶಹಾಬಾದ ನಗರದ ಸಾರ್ವಜನಿಕರು ಬಹಿಷ್ಕರಿಸಲಿದ್ದಾರೆ ಎಂದು ಎಚ್ಚರಿಕೆ ನೀಡುತ್ತೆವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶರಣಗೌಡ ಪಾಟೀಲ,ನಾಗಣ್ಣ ರಾಂಪೂರೆ,ಗುಂಡಮ್ಮ ಮಡಿವಾಳ, ಮಲ್ಲೇಶಿ ಭಜಂತ್ರಿ,ಜಗನ್ನಾಥ.ಎಸ್.ಹೆಚ್,ಮಹ್ಮದ್ ಮಸ್ತಾನ,ಮಲ್ಲಣ್ಣ ಮಸ್ಕಿ, ಮಲ್ಕಣ್ಣ ಮುದ್ದಾ, ಮಲ್ಲಿಕಾರ್ಜುನ ಹಳ್ಳಿ ,ಸ್ನೇಹಲ್ ಜಾಯಿ,ನಾಗಪ್ಪ ರಾಯಚೂರಕರ್ ಇತರರು ಇದ್ದರು.

ಸುಳ್ಳು ಆಶ್ವಾಸನೆಗೆ ಬೇಸತ್ತು ಫೆ.19ರಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.ಅಂದು ಭರವಸೆ ಈಡೇರದಿದ್ದರೇ ಮುಂಬರುವ ಲೋಕಸಭಾ ಚುನಾವಣೆ ಬಹಿಷ್ರಿಸಲಿದ್ದೆವೆ- ಮರಿಯಪ್ಪ ಹಳ್ಳಿ ರಾಜ್ಯ ಸಂಘಟನಾ ಸಂಚಾಲಕ ದಸಂಸ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420