ಮೆಹಂದಿ ಕಲೆ ಸ್ಪರ್ಧೆ: ಜನನಿ ಕಾಲೇಜ್ ವಿದ್ಯಾರ್ಥಿನಿ ಗೌತಮಿ ಪ್ರಥಮ

0
9

ಸುರಪುರ: 2023-24 ನೇ ಸಾಲಿನಲ್ಲಿ ಬೀದರ್ ಜಿಲ್ಲೆಯಲ್ಲಿ ನಡದ ಶಕ್ತಿಸಂಭ್ರಮ “ಯುವ ಯುವಜನೋತ್ಸವ”ದಲ್ಲಿ ನಗರದ ಶ್ರೀ ಜನನಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾದ ಗೌತಮಿ ಮಳ್ಳಿಯವರು ಭಾಗವಹಿಸಿ “ಮೆಹಂದಿ” ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ದಕ್ಷಿಣ ವಲಯಕ್ಕೆ ಆಯ್ಕೆಯಾಗಿರುತ್ತಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಆದಿಶೇಷ ನೀಲಗಾರವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಜೊತೆಗೆ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಅಭಿನಂದನೆ ತಿಳಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here