ಸುರಪುರ: ನಗರದ ರಾಯರ ಗುಡಿಯಲ್ಲಿ ದಾಸಶ್ರೇಷ್ಠ ಶ್ರೀ ಪುರಂದರದಾಸರ ಆರಾಧನೆಯನ್ನು ಭಕ್ತಿ ಶ್ರದ್ಧೆಗಳಿಂದ ಆಚರಿಸಲಾಯಿತು.
ಆರಾಧನೆ ಪ್ರಯುಕ್ತ ಪುರಂದರದಾಸರ ವೇಷಧಾರಿಗಳಾಗಿದ್ದ ಗುರುರಾಜಾಚಾರ್ಯ ಪಾಲ್ಮೂರ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಗೋಪಾಳ ಬೇಡುವ ಕಾರ್ಯಕ್ರಮ ನಡೆಯಿತು ನಂತರ ಪುರಂದರದಾಸರ ಭಾವಚಿತ್ರಕ್ಕೆ ಪೂಜೆ ನೆರವೇರಿಸಲಾಯಿತು.
ವಾಯುದೇವರು ಹಾಗೂ ರಾಯರು, ಟೀಕಾರಾಯರು ಹಾಗೂ ಕೃಷ್ಣದ್ವೈಪಾಯನ ತೀರ್ಥ ಮೂರು ವೃಂದಾವನಗಳಿಗೆ ವಿಶೇಷ ಅಲಂಕಾರ ಹಾಗೂ ನೈವೇದ್ಯ, ಹಸ್ತೋದಕ ನೆರವೇರಿಸಲಾಯಿತು, ಸಾಯಂಕಾಲ ಶ್ರೀ ರಘುವೀರರಾಮಧ್ಯಾನ ಮಹಿಳಾ ಭಜನಾ ಮಂಡಳಿಯವರಿಂದ ಭಜನೆ ಹಾಗೂ ಮಂಗಳಾರುತಿ ಮುಂತಾದ ಕಾರ್ಯಕ್ರಮಗಳು ಜರುಗಿದವು.
ಅರ್ಚಕರಾದ ವಾದಿರಾಜ ಬೂದುರು, ನರಸಿಂಹರಾವ ಬಾಡಿಯಾಳ, ಮಧುಸೂದನ ಡಬೀರ,ನರಸಿಂಹ ಭಂಡಿ,ಗುರುರಾಜ ಬಾಡಿಯಾಲ,ಶ್ರೀನಿಧಿ ಐಜಿ,ದಾಮೋದರ ಮುಂತಾದವರು ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…