ಬೋನ್ಹಾಳ:ಆಂಧ್ರ ಮೂಲದ ವ್ಯಕ್ತಿಗಳಿಂದ ಸರಕಾರಿ ಭೂಮಿ ಅತಿಕ್ರಮಣ ಆರೋಪ

0
14

ಸುರಪುರ: ತಾಲೂಕಿನ ಬೋನ್ಹಾಳ ಗ್ರಾಮದಲ್ಲಿ ಆಂಧ್ರ ಮೂಲದ ವ್ಯಕ್ತಿಗಳಿಂದ ಸರಕಾರಿ ಭೂಮಿ ಅತಿಕ್ರಮ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ರಮೇಶ ಅಪರಾದಿ ಆರೋಪಿಸಿದ್ದಾರೆ.

ನಗರದಲ್ಲಿ ತಹಸಿಲ್ದಾರ್ ಕೆ.ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿರುವ ರಮೇಶ ಅಪರಾದಿ,ಆಂಧ್ರ ಮೂಲದ ವ್ಯಕ್ತಿಗಳು ಕಳೆದ 20 ವರ್ಷಗಳಿಂದ ಗ್ರಾಮದಲ್ಲಿ ಇದ್ದು,ಈಗ ಗ್ರಾಮದ ಬಳಿಯಲ್ಲಿನ ಸರಕಾರಿ ಜಮೀನು ಸುಮಾರು 30 ರಿಂದ 40 ಎಕರೆಯಷ್ಟು ಅತಿಕ್ರಮ ಮಾಡಿಕೊಂಡಿದ್ದಾರೆ.

Contact Your\'s Advertisement; 9902492681

ಇದಕ್ಕೆ ಸ್ಥಳಿಯ ಪ್ರಭಾವಿ ವ್ಯಕ್ತಿಗಳ ಬೆಂಬಲ ಇರುವ ಸಾಧ್ಯತೆ ಇದೆ.ಆದ್ದರಿಂದ ಇದರ ಕುರಿತು ತನಿಖೆ ನಡೆಸಿ ಸರಕಾರಿ ಭೂಮಿಯನ್ನು ಮರಳಿ ವಶಕ್ಕೆ ಪಡೆದುಕೊಳ್ಳಬೇಕು ಮತ್ತು ಅತಿಕ್ರಮಣ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here