ಆಳಂದ: ಇತ್ತೀಚಿಗಷ್ಟೇ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಸರ್ಕಾರಿ ಶಾಲೆಗಳು ಹಳೆಯ ವಿದ್ಯಾರ್ಥಿಗಳ ನೆರವಿನಿಂದ ಅಭಿವೃದ್ಧಿ ಕಾಣಲಿ ಎಂದು ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ನೂತನ ಕಾರ್ಯಕ್ರಮವನ್ನು ಘೋಷಿಸಿದ್ದಾರೆ ಆದರೆ ಅದು ಸರ್ಕಾರದ ಮಟ್ಟದಲ್ಲಿ ಅನುಷ್ಠಾನ ಆಗುವುದಕ್ಕಿಂತ ಮುಂಚೆಯೇ ಈ ಗ್ರಾಮದ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಅನುಷ್ಠಾನಗೊಳಿಸಿದ್ದಾರೆ.
ನೆರೆಯ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಆಳಂದ ತಾಲೂಕಿನ ಜವಳಗಾ ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಶಾಲೆಗೆ ಬೇಕಾದ ಅನೂಕೂಲ ಮಾಡಿಕೊಡುವುದರ ಮೂಲಕ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.
ಸಧ್ಯ ಈ ಗ್ರಾಮದಲ್ಲಿ 1ರಿಂದ 8ನೇ ತರಗತಿಯವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದ್ದು ಇಲ್ಲಿ 141 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಗ್ರಾಮವಾಗಿರುವುದರಿಂದ ಇಲ್ಲಿಯ ಜನರು ಹೆಚ್ಚಾಗಿ ಮರಾಠಿ ಮತ್ತು ಕನ್ನಡ ಮಾತನಾಡುತ್ತಾರೆ. ಆಂಗ್ಲ್ ಭಾಷಾ ಮಾಧ್ಯಮದ ಹಾವಳಿಯ ಹಾಗೂ ಮರಾಠಿ ಭಾಷೆಯ ನಡುವೆಯೂ ಕನ್ನಡ ಶಾಲೆಗಳು ಉಳಿಯಲಿ, ಬೆಳೆಯಲಿ ಎನ್ನುವುದು ಹಳೆಯ ವಿದ್ಯಾರ್ಥಿಗಳ ಆಶಯ. ತಾವು ಕಲಿತ ಶಾಲೆಗೆ ಏನಾದರೂ ಅಳಿಲು ಸೇವೆ ಮಾಡಬೇಕು ಎಂದು ನಿಶ್ಚಯಿಸಿದ ಹಳೆಯ ವಿದ್ಯಾರ್ಥಿಗಳು ಶಾಲೆಗೆ ಬೇಕಾದ ಉಪಕರಣಗಳನ್ನು ನೀಡಿ ಮತ್ತೆ ಸರ್ಕಾರಿ ಶಾಲೆಗಳ ಕಡೆ ವಿದ್ಯಾರ್ಥಿಗಳು ತಿರುಗಿ ಬರುವಂತೆ ಮಾಡಿದ್ದಾರೆ.
ಈ ಶಾಲೆಯ ಮತ್ತೊಂದು ವಿಶೇಷವೆಂದರೆ ಇಲ್ಲಿ ಒಬ್ಬ ಗೌರವ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಪಕ್ಕದ ಅಣೂರ ಊರಿನವರಾಗಿದ್ದು ಬಿಎಸ್ಸಿಯಲ್ಲಿ ಕಂಪ್ಯೂಟರ್ ಸೈನ್ಸ್ ಓದಿದ್ದಾರೆ. ಯಾವುದೇ ಫಲಾಪೇಕ್ಷೆಯಿಲ್ಲದೇ ಸ್ವಂತ ಊರಿನಿಂದ ಬಂದು ಮಕ್ಕಳಿಗೆ ಗಣಿತದ ಜೊತೆಗೆ ಕಂಪ್ಯೂಟರ್ ಕಲಿಸುತ್ತಿದ್ದಾರೆ. ಇವರ ನಿಸ್ವಾರ್ಥ ಸೇವೆಗೆ ಗ್ರಾಮದ ಜನ ಕೊಂಡಾಡುತ್ತಿದ್ದಾರೆ.
ಈ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿ ಈಗ ಬೇರೆ ಬೇರೆ ಊರುಗಳಲ್ಲಿ ಉದ್ಯೋಗದಲ್ಲಿರುವ ಹಳೆಯ ವಿದ್ಯಾರ್ಥಿಗಳು ತಮ್ಮ ಕೈಲಾದ ದೇಣಿಗೆ ಸಂಗ್ರಹಿಸಿ ಶಾಲೆಗೆ ಬೇಕಾದ 11 ಕಂಪ್ಯೂಟರ್, 1 ಪ್ರಿಂಟರ್, 1 ಅಲ್ಮೇರಾ ಮತ್ತು ಶಾಲೆಯಲ್ಲಿ ಸಣ್ಣ ಪುಟ್ಟ ಕಾರ್ಯಕ್ರಮಗಳು ನಡೆಸಿಕೊಂಡು ಹೋಗಲು 1 ಟೆಂಟ್ ಖರೀದಿಸಿ ಕೊಟ್ಟಿದ್ದಾರೆ ಕೆಲವು ಜನ ನಗದು ಹಣವನ್ನು ನೀಡಿ ಶಾಲೆಗೆ ಬೇಕಾದ ಸಂಪನ್ಮೂಲಗಳನ್ನು ಖರೀದಿಸಿ ಎಂದು ಹೇಳಿದ್ದಾರೆ.
ಗ್ರಾಮದ ಹಳೆಯ ವಿದ್ಯಾರ್ಥಿಗಳು ಸೇರಿ ಶಾಲೆಗೆ ಹೊಸ ಸ್ವರೂಪ ಕೊಡುವ ನಿಟ್ಟಿನಲ್ಲಿ ಒಂದು ಸಣ್ಣ ಸಹಾಯ ಮಾಡಿದ್ದೇವೆ. ಮುಂದೆಯೂ ಕೂಡ ಸಹಾಯ ಮಾಡುತ್ತೇವೆ. ಒಟ್ಟಿನಲ್ಲಿ ನಮಗೆ ಅಕ್ಷರ ಕಲಿಸಿದ ಶಾಲೆಯ ಋಣ ತೀರಿಸುವ ಕಾರ್ಯ ಮಾಡುತ್ತೇವೆ. ಶಾಲೆಯಲ್ಲಿ ಕಂಪ್ಯೂಟರಗಳು ಬಂದಾಗಿನಿಂದ ವಿದ್ಯಾರ್ಥಿಗಳು ಆಸಕ್ತಿಯಿಂದ ಶಾಲೆಗೆ ಬರುತ್ತಿದ್ದಾರೆ. – ಲಿಂಗರಾಜ ಲೆಂಡೆ, ಹಳೆಯ ವಿದ್ಯಾರ್ಥಿ, ಸರ್ಕಾರಿ, ಹಿರಿಯ ಪ್ರಾಥಮಿಕ ಶಾಲೆ, ಜವಳಗಾ ಜೆ
ಗ್ರಾಮದ ವಿದ್ಯಾರ್ಥಿಗಳು ಶಾಲೆಯ ಬೆಳವಣಿಗೆಗೆ ಸಹಕಾರ ನೀಡಿದ್ದಾರೆ. ಇದರಿಂದ ಖಾಸಗಿ, ಆಂಗ್ಲ್ ಮಾಧ್ಯಮ ಹಾಗೂ ನೆರೆಯ ಮಹಾರಾಷ್ಟ್ರಕ್ಕೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗಬಹುದು ಎನ್ನುವ ನೀರಿಕ್ಷೆಯಿದೆ. ಸರ್ಕಾರವು ಕೂಡ ಶಾಲಾ ಕೋಣೆಗಳ ನಿರ್ಮಾಣಕ್ಕೆ ಆದ್ಯತೆ ನೀಡಿದರೇ ಸಮಸ್ಯೆ ಬಗೆಹರಿದಂತೆ ಆಗುತ್ತದೆ. – ಬಸವರಾಜ ಗುತ್ತೇದಾರ, ಎಸ್ಡಿಎಂಸಿ ಅಧ್ಯಕ್ಷ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಜವಳಗಾ ಜೆ.
ಶಾಲೆಯಲ್ಲಿ ಸಂಪನ್ಮೂಲದ ಕೊರತೆ ಇತ್ತು ಇದನ್ನು ಮನಗಂಡು ಇಲ್ಲಿ ಕಲಿತ ವಿದ್ಯಾರ್ಥಿಗಳು ಶಾಲೆಗೆ ಬಂದು ಏನೇನು ಬೇಕು ಎಂದು ಪಟ್ಟಿ ಮಾಡಿಕೊಂಡು ಹೋಗಿದ್ದರು ಅದರಂತೆ ಅವರು ಶಾಲೆಗೆ ಅವಶ್ಯಕವಾಗಿ ಬೇಕಾದ ಸಾಮಗ್ರಿಗಳನ್ನು ನೀಡಿದ್ದಾರೆ. ಇದರಿಂದ ಮಕ್ಕಳಲ್ಲಿ ಹೊಸ ಚೈತನ್ಯ ಬಂದಂತಾಗಿದೆ. ಕಂಪ್ಯೂಟರಗಳು ಬಂದ ಮೇಲೆ ವಿದ್ಯಾರ್ಥಿಗಳು ಶಾಲೆ ತಪ್ಪಿಸುವುದನ್ನು ಬಿಟ್ಟಿದ್ದಾರೆ ಅಲ್ಲದೇ ಆಸಕ್ತಿಯಿಂದ ಕಲಿಕೆಯಲ್ಲಿ ತೊಡಗಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…