ಬಿಸಿ ಬಿಸಿ ಸುದ್ದಿ

ವಾಡಿ: ಕಾಯಕ ಶರಣರ ಜಯಂತಿ ಆಚರಣೆ

ವಾಡಿ: ಮಾದರ ದೊಳ್ಳಯ್ಯ ಡೋಹರ ಕಕ್ಕಯ್ಯ, ಮಾದರ ಚೆನ್ನಯ್ಯ, ಸಮಗಾರ ಹರಳ್ಳಯ್ಯ, ಉರಿಲಿಂಗ ಪೆದ್ದಿ ಸಮುದಾಯದ ಕಾಯಕ ಶರಣರ ಜಯಂತಿಯನ್ನು ಬಿಜೆಪಿ ಕಛೇರಿಯಲ್ಲಿ ಆಚರಿಸಲಾಯಿತು.

ಈ ವೇಳೆ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ
ಶರಣರು ಹನ್ನೆರಡನೇ ಶತಮಾನದಲ್ಲಿ ನೀಡಿದ ಸಂದೇಶಗಳು ಈ ಭೂಮಿಯ ಮೇಲೆ ಮನುಷ್ಯರು ಇರುವರೆಗೆ ಪ್ರಸ್ತುತವಾಗಿರುವವು,
ಈ ಮಣ್ಣಿನ ಸಂಸ್ಕೃತಿ ಉಳಿವಿಗೆ ಅನೇಕ ಮಹನೀಯರ ಶ್ರಮ ಕಾರಣವಾಗಿದೆ.ಅವರು ಅಳವಡಿಸಿಕೊಂಡಿದ್ದ ಜೀವನಯ ಮೌಲ್ಯಗಳು ದೇಶದ ಹಿರಿಮೆಯನ್ನು ಹೆಚ್ಚಿಸಿವೆ. ಆದ್ದರಿಂದ ಈ ಮಣ್ಣಿನ ಮಹನೀಯರ ಮೌಲ್ಯ ಎಂದು ಮರೆಯಲಾರದಂತದ್ದು
ಎಂದರು.

12ನೇ ಶತಮಾನವು ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ ಕಾಲ ಇಂತಹ ಸಂದರ್ಭದಲ್ಲಿ ಜೀವಿಸಿದ ಎಲ್ಲಾ ಶರಣರು ತಮ್ಮ ಜೀವನವನ್ನೇ ಸಮಾಜದ ಏಳಿಗೆಗಾಗಿ ಮುಡುಪಾಗಿಟ್ಟಿದ್ದರು. ಈ ಕಾಯಕ ಶರಣರ ಸಾಮಾಜಿಕ ಕ್ರಾಂತಿಯ ಆದರ್ಶಮಯ ಜೀವನ ಮತ್ತು ತತ್ವಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ತಲುಪಿಸುವಂತಹ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರವಿ ನಾಯಕ,ಮುಖಂಡರಾದ ರಾಮಚಂದ್ರ ರಡ್ಡಿ, ಸಿದ್ದಣ್ಣ ಕಲ್ಲಶೆಟ್ಟಿ, ಭೀಮರಾವ ದೊರೆ, ಶರಣಗೌಡ ಚಾಮನೂರ, ಶಿವಶಂಕರ ಕಾಶೆಟ್ಟಿ,ಪ್ರಕಾಶ ಪುಜಾರಿ,ಸತೀಶ ಸಾವಳಗಿ, ಅಯ್ಯಣ್ಣದಂಡೋತಿ, ಬಸವರಾಜ ಪಗಡಿಕರ, ದೇವೇಂದ್ರ ಪಂಚಾಳ, ಯಂಕಮ್ಮ ಗೌಡಗಾಂವ, ಅನುಸುಭಾಯಿ ಪವಾರ ಸೇರಿದಂತೆ ಇತರರು ಇದ್ದರು.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

2 hours ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

2 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

3 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

3 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

3 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

4 hours ago