ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಕ್ಕಾಗಿ ಪ್ರಸಾದ್ ಸಿ ಬುಕ್ಕಾಗೆ ಸನ್ಮಾನ

ಕಲಬುರಗಿ; ಶರಣಬಸವೇಶ್ವರ ವಾಣಿಜ್ಯ ಪದವಿ ಕಾಲೇಜಿನಲ್ಲಿ ಬಿ.ಕಾಂ ಕೋರ್ಸ್ ಓದುತ್ತಿರುವ ಪ್ರಸಾದ್ ಸಿ ಬುಕ್ಕಾ ತಮ್ಮ ಎರಡನೇ ಪ್ರಯತ್ನದಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದುಕೊಟ್ಟಿದ್ದಕ್ಕಾಗಿ ಕಾಲೇಜು ಆಡಳಿತ ಮಂಡಳಿ ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದಿಂದ ಸನ್ಮಾನಿಸಲಾಯಿತು.

ಕಲಬುರಗಿ ನಗರದಲ್ಲಿ ಶನಿವಾರ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ, ಕಾಲೇಜಿನ ಸಿಎ ಫೌಂಡೇಶನ್ ಕೋರ್ಸ್‍ನ ನಿರ್ದೇಶಕಿ ಡಾ. ಇಂದಿರಾ ಬಿ ಶೆಟಕಾರ್, ಪ್ರಾಂಶುಪಾಲ ಡಾ. ದಶರಥ್ ಮೇತ್ರೆ ಮತ್ತು ಶರಣಬಸವ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ವಿಭಾಗದ ಡೀನ್ ಶ್ರೀ ಟಿ ವಿ ಶಿವಾನಂದನ್ ಅವರು ವಿದ್ಯಾರ್ಥಿಯ ಶ್ರಮವನ್ನು ಗುರುತಿಸಿ, 5000 ರೂಪಾಯಿಗಳ ಚೆಕ್ ನೀಡಿ ಸನ್ಮಾನಿಸಿದರು.

ಸನ್ಮಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಶ್ರೀ ಶಿವಾನಂದನ್ ಅವರು, ಬುಕ್ಕಾ ಅವರ ಪರಿಶ್ರಮ ಮತ್ತು ಶ್ರೇಷ್ಠತೆಯ ಬದ್ಧತೆಯನ್ನು ಶ್ಲಾಘಿಸಿದರು. ಚಾರ್ಟರ್ಡ್ ಅಕೌಂಟೆಂಟ್‍ನ ಅಡಿಪಾಯ ಪರೀಕ್ಷೆಯು ಸಾಮಾನ್ಯ ಪರೀಕ್ಷೆಯಲ್ಲ, ಆದರೆ ಮೂಲಭೂತ ಲೆಕ್ಕಪತ್ರದ ಬಗ್ಗೆ ವಿದ್ಯಾರ್ಥಿಯ ತಿಳುವಳಿಕೆಯನ್ನು ಮೌಲ್ಯಮಾಪನ ಮಾಡುವ ಕಠಿಣ ಪರೀಕ್ಷೆಯಾಗಿದೆ. “ಅಂತಹ ಪರೀಕ್ಷೆಯಿಂದ ವಿಜಯಶಾಲಿಯಾಗಿ ಹೊರಹೊಮ್ಮಲು, ಅಕೌಂಟೆನ್ಸಿ ಕ್ಷೇತ್ರದಲ್ಲಿ ಪ್ರಸಾದ ಬುಕ್ಕಾ ಅವರ ತಿಳುವಳಿಕೆ ಮತ್ತು ಆಳವಾದ ಅಧ್ಯಯನವೇ ಕಾರಣ” ಎಂದರು.

ಕೋರ್ಸನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುವಲ್ಲಿ ಕಾಲೇಜಿನೊಂದಿಗೆ ಕೈಜೋಡಿಸಿರುವ ಕಾಲೇಜಿನ ಅಧ್ಯಾಪಕರು ಹಾಗೂ ಅರಿವುಪೆÇ್ರ ಫೌಂಡೇಶನ್, ಅವರ ಬದ್ಧತೆ ಮತ್ತು ವಿದ್ಯಾರ್ಥಿಗಳಿಗೆ ನೀಡಿದ ಬೆಂಬಲಕ್ಕಾಗಿ ಅಭಿನಂದಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ದಶರಥ್ ಮೇತ್ರೆ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಡಾ. ಶೆಟಕಾರ್ ಅವರು ಪಟ್ಟ ಶ್ರಮ ಮುಂದೆ ಬರುವ ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಲು ದಾರಿದೀಪವಾಗಿದೆ ಎಂದರು. ಮುಂದಿನ ಶೈಕ್ಷಣಿಕ ವರ್ಷದಿಂದ ಐದು ವರ್ಷಗಳ ಸಮಗ್ರ ಕಾನೂನು ಕೋರ್ಸ್ ಆರಂಭಿಸಲು ಕಾಲೇಜು ಮುಂದಾಗಿದ್ದು, ಶೀಘ್ರದಲ್ಲೇ ಈ ಬಗ್ಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಐದು ವರ್ಷಗಳ ಕೋರ್ಸ್‍ನಲ್ಲಿ ಮೊದಲ ಮೂರು ವರ್ಷಗಳಲ್ಲಿ ನಿಯಮಿತ ವಾಣಿಜ್ಯ ವಿಷಯಗಳನ್ನು ಕಲಿಸಲಾಗುವುದು ಮತ್ತು ಕೊನೆಯ ಎರಡು ವರ್ಷಗಳು ವಿದ್ಯಾರ್ಥಿಗಳಲ್ಲಿ ಕಾನೂನು ಬಗೆಗಿನ ಕೌಶಲ್ಯವನ್ನು ಹೆಚ್ಚಿಸಲು ಹಾಗೂ ಆಳವಾದ ಅಧ್ಯಯನ ಮಾಡಲು ಮೀಸಲಾಗಿರುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಾನಂದ ಪಾಟೀಲ, ಉಪಾಧ್ಯಕ್ಷ ಕಲ್ಲಿನಾಥ ಪಾಟೀಲ ಹಾಗೂ ಡಾ. ಇಂದಿರಾ ಶೆಟಕಾರ ಮಾತನಾಡಿದರು. ಪ್ರಸಾದ ಬುಕ್ಕಾ ಅವರು ಫೌಂಡೇಶನ್ ಪರೀಕ್ಷೆಗೆ ಹೇಗೆ ತಯಾರಿ ನಡೆಸಿದ್ದರು ಎನ್ನುವುದರ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420