8 ತಿಂಗಳ ಕಲಬುರಗಿ ಅಭಿವೃದ್ಧಿಯ ಲೆಕ್ಕಾ ಕುಡಿ: ಬಿಜೆಪಿ ಮುಖಂಡರಿಂದ ಕಾಂಗ್ರೆಸ್ ಶಾಸಕರಿಗೆ ಮನವಿ

0
29

ಕಲಬುರಗಿ: ಕಳೆದ ಎಂಟು ತಿಂಗಳಿಂದ ಯಾವುದೇ ಅಭಿವೃದ್ಧಿ ಮಾಡದೇ ಜನರನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಎಂಟು ತಿಂಗಳಲ್ಲಿ ಏನು ಮಾಡಿದ್ದೀರಿ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಿ ಎಂದು ಬಿಜೆಪಿಯಿಂದ ಹಮ್ಮಿಕೊಂಡ ಮತದಾರರಿಗೆ ಉತ್ತರಿಸಿ ಅಭಿಯಾನದ ಹಿನ್ನೆಲೆಯಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಅವರ ಮನೆಗೆ ಹಾಗೂ ಕಲಬುರಗಿ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಯಿತು. ಅಭಿವೃದ್ಧಿಯ ಉತ್ತರ ನೀಡಿ, ಜನರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಮನವಿ ಮಾಡಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಬಿಜಿಪಿ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಮಾಜಿ ಕೆಕೆಆರ್‍ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೆವೂರ, ಮಹಾನಗರ ಪಾಲಿಕೆಯ ಮಹಾಪೌರ ವಿಶಾಲ ದರ್ಗಿ, ಉಪಮಹಾಪೌರ ಶಿವಾನಚಿದ ಪಿಸ್ತಿ, ಬಿಜೆಪಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಪ್ರದಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here