ಕಲಬುರಗಿ: ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸ್ಟುಡೆಂಟ್ ಎಕ್ಟಿವಿಟಿ ಸೆಂಟರ್ನಲ್ಲಿ ಫೆ. 12ರಂದು ಬೆಳಗ್ಗೆ 10 ಗಂಟೆಗೆ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜ್ಯುಕೇಶನ್ನ 52ನೇ ವಾರ್ಷಿಕ ಫ್ಯಾಕಲ್ಟಿ ಘಟಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಎಚ್ಕೆಇ ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ತಿಳಿಸಿದರು.
ಸಂಸದ ಡಾ. ಉಮೇಶ ಜಾಧವ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಬೆಳಗಾವಿ, ಗ್ವಾಲಿಯಾರ್, ನವದೆಹಲಿ, ಚನೈ ಸೇರಿದಂತೆ ವಿವಿಧ ವಿವಿಗಳ ಪರಿಣತರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಡಾ. ಭೀಮಾಶಂಕರ ಬಿಲಗುಂದಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮರು ದಿನ ಫೆ. 13ರಂದು ಬೆಳಗ್ಗೆ 10 ಗಂಟೆಗೆ ಪಿಡಿಎ ಕಾಲೇಜು, ನ್ಯಾಶನಲ್ ಸ್ಕಿಲ್ ಡೆವಲಪ್ಮೆಂಟ್ ಮತ್ತು ಎಥ್ನೋಟೆಕ್ ಅಕಾಡೆಮಿ ಸಹಯೋಗದಲ್ಲಿ ಪೂಜ್ಯ ಬಸವರಾಜ ದೊಡ್ಡಪ್ಪ ಅಪ್ಪ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ ತರಬೇತಿ ಕೇಂದ್ರದ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಆದಿ ಚುಂಚನಗಿರಿ ಮಠದ ಜಗದ್ಗುರು ಡಾ. ನಿರ್ಮಲಾನಂದ ಸ್ವಾಮೀಜಿ, ಡಾ. ಪ್ರಕಾಶನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಸಂಸದ ಭಗವಂತ ಖೂಬಾ ಈ ಕೇಂದ್ರವನ್ನು ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಸುಭಾಷ ಸರ್ಕಾರ ಮುಖ್ಯ ಅತಿಥಿಗಳಾಗಿ ಭಾಗವಹಿಲಿದ್ದಾರೆ ಎಂದು ತಿಳಿಸಿದರು.
ಐಎಸ್ಟಿಇ ಅಧ್ಯಕ್ಷ ಪ್ರತಾಪಸಿನ್ಹ ಕೆ. ದೇಸಾಯಿ, ಎಥೋಟೆಕ್ ಗ್ರೂಪ್ ಆಫ್ ಕಂಪನಿಯ ಚೇರ್ಮನ್ ಡಾ. ಕಿರಣ ಕೆ. ರಾಜಣ್ಣ, ಪ್ರಾಚಾರ್ಯ ಡಾ. ಶಶಿಕಾಂತ ಮೀಸೆ, ರವೀಂದ್ರ ಲಠ್ಠೆ, ಬಾಬುರಾವ ಶೇರಿಕಾರ ಇತರರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…