ಬಿಸಿ ಬಿಸಿ ಸುದ್ದಿ

ಸಮಾಜಮುಖಿ ಸಾಹಿತ್ಯ ಅಗತ್ಯ: ಮಾತೋಶ್ರೀ ದಾಕ್ಷಾಯಣಿ ಅಪ್ಪಾ

ಲೇಖಕಿ ಶಕುಂತಲಾ ಪಾಟೀಲ ರವರ ಎರಡು ಕೃತಿಗಳ ಜನಾರ್ಪಣೆ

ಕಲಬುರಗಿ: ಸಂಸಾರದಲ್ಲಿ ನೋವು ನಲಿವು ಒಂದಾಗಿಸಿಕೊಂಡು ಮುನ್ನಡೆಯುವ ಪರಂಪರೆ ಜವಳಿ ಕುಟುಂಬದಲ್ಲಿ ಕಾಣಬಹುದು. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃತಿಗಳು ಕನ್ನಡ ಸಾರಸ್ವತ ಲೋಕಕ್ಕೆ ಸೇರಲಿ. ಸಮಾಜ ನಿರೀಕ್ಷಿಸುವ ಸಾಹಿತ್ಯ ಹಾಗೂ ಜನರ ಮನ ತಿದ್ದುವ ಸಾಹಿತ್ಯ ಇಂದು ಅಗತ್ಯವಾಗಿದೆ ಎಂದು ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ. ದಾಕ್ಷಾಯಣಿ ಎಸ್ ಅಪ್ಪಾ ನುಡಿದರು.

ಹಿರಿಯ ಲೇಖಕಿ ಶಕುಂತಲಾ ಪಾಟೀಲ ಜಾವಳಿ ಅವರ ವಿರಚಿತ ಬೆಳಕು ತುಂಬಿದ ಭಾವ ಮತ್ತು ಅನುಭವಾಮೃತ ಎಂಬ ಎರಡು ಕೃತಿಗಳನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದ ಅವರು, ಸಾಹಿತ್ಯ ಮತ್ತು ಸಮಾಜ ವ್ಯಕ್ತಿತ್ವವನ್ನು ಕಟ್ಟಿ ಕೊಡುತ್ತವೆ. ಅಂಥ ಬದುಕು ಕವಯತ್ರಿ ಶಕುಂತಲಾ ಪಾಟೀಲ ಜಾವಳಿಯವರದ್ದಾಗಿದೆ ಎಂದು ಹೇಳಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಶರಣ ಸಾಹಿತ್ಯಕ್ಕೆ ಜವಳಿ ಕುಟುಂಬದ ಸೇವೆ ಸದಾ ಸ್ಮರಣೀಯವಾಗಿದೆ. ಮಾನವೀಯ ಮೌಲ್ಯಗಳು ಕಳಚುತ್ತಿರುವ ಈ ಸಮಾಜದಲ್ಲಿ ಮಾನವೀಯ ನೆಲೆಯಲ್ಲಿ ಸಮಾಜಮುಖಿ ಚಿಂತನೆಗಳನ್ನು ಮೈಗೂಡಿಸಿಕೊಂಡು ಹೋಗಬೇಕಾಗಿದೆ ಎಂದರು.

ಮಾದನ ಹಿಪ್ಪರಗಾದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಜೀ, ಪುಸ್ತಕ ಓದುವ ಸಂಸ್ಕøತಿ ಕಡಿಮೆಯಾಗುತ್ತಿದೆ. ಇದಕ್ಕೆ ಮೊಬೈಲ್ ಸಂಸ್ಕøತಿಯೇ ಕಾರಣವಾಗಿದೆ. ಒತ್ತಡದ ಜೀವನದಲ್ಲಿ ನಾವೆಲ್ಲ ಸಾಗುತ್ತಿದ್ದೇವೆ. ನಡುವೆ ಸಮಭಾವದ ಮನಸ್ಸಿನ ಸಾಹಿತ್ಯ ಜನಮಾನಸಕ್ಕೆ ತಟ್ಟುತ್ತದೆ. ಓದುವದರಲ್ಲಿ ಸಮಯ ಮೀಸಲಿಡಬೇಕು. ಇಂದು ಖರೀದಿಸುವ ಮನೋಭಾವ ಎಲ್ಲರಲ್ಲಿ ಮೂಡಿದಾಗ ಲೇಖಕರಿಗೆ ಪ್ರೋತ್ಸಾಹಿಸಿದಂತಾಗುವುದು. ಈ ಸಂಸ್ಕಾರ ಸಮಾಜದಲ್ಲಿ ಬೆಳೆಯಲಿ ಎಂದು ಆಶಿಸಿದರು.

ಲೇಖಕಿ ಶಕುಂತಲಾ ಪಾಟೀಲ ಜಾವಳಿ, ಯಶ್ವಂತರಾವ ಪಾಟೀಲ ಗರಡಶೆಟ್ಟಿ, ಡಾ. ಕೆ ಗಿರಿಮಲ್ಲ ಮಾತನಾಡಿದರು. ಬೆಳಕು ತುಂಬಿದ ಭಾವ ಕೃತಿ ಕುರಿತು ಡಾ.ನೀಲಾಂಬಿಕಾ ಪೊಲೀಸ್ ಪಾಟೀಲ ಹಾಗೂ ಅನುಭವಾಮೃತ ಕೃತಿ ಕುರಿತು ಡಾ. ಇಂದುಮತಿ ಪಿ ಪಾಟೀಲ ಅವರು ಪರಿಚಯ ಮಾಡಿದರು.

ಹಿರಿಯ ಶರಣ ಚಿಂತಕ ಶರಣಬಸಪ್ಪ ಪಾಟೀಲ ಜಾವಳಿ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ವರಿ ಚಂದಾ, ಉಷಾರಾಣಿ ಪಾಟೀಲ, ಜ್ಯೋತಿ ಪಾಟೀಲ, ಪ್ರಭುಲಿಂಗ ಗರಡಶೆಟ್ಟಿ, ರಾಜಶೇಖರ ಪಾಟೀಲ ಜಾವಳಿ, ಶಿವಶಂಕರ ಪಾಟೀಲ, ಸಿದ್ಧರಾಮ ಗರಡಶೆಟ್ಟಿ, ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಯಶ್ವಂತರಾಯ ಅಷ್ಠಗಿ, ಶರಣರಾಜ್ ಛಪ್ಪರಬಂದಿ, ಕಲಾವಿದ ಸಿದ್ಧಾರ್ಥ ಚಿಮ್ಮಾಇದಲಾಯಿ ಹಾಗೂ ಸಂಗಡಿಗರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರಮುಖರಾದ ಎ ಕೆ ರಾಮೇಶ್ವರ, ಡಾ. ಬಿ ಎ ಪಾಟೀಲ ಮಹಾಗಾಂವ, ಧರ್ಮಣ್ಣಾ ಹೆಚ್ ಧನ್ನಿ, ಡಾ. ವಿಜಯಲಕ್ಷ್ಮೀ ಕೋಸಗಿ, ಶಾಂತಾ ಪಸ್ತಾಪುರ, ಜ್ಯೋತಿ ಕೋಟನೂರ, ವಿನೋದ ಜೇನವೇರಿ, ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ಮಲ್ಲಿನಾಥ ದೇಶಮುಖ, ರೇವಣಸಿದ್ದಪ್ಪ ಜೀವಣಗಿ, ಶಿವಲಿಂಗಪ್ಪ ಅಷ್ಟಗಿ, ಲಕ್ಷ್ಮಣರಾವ ಕಡಬೂರ, ನಾಗಪ್ಪ ಸಜ್ಜನ್, ಸಂತೋಷ ಕುಡಳ್ಳಿ, ಕಲ್ಯಾಣಕುಮಾರ ಶೀಲವಂತ, ಪ್ರಭುಲಿಂಗ ಮೂಲಗೆ, ಗಣೇಶ ಚಿನ್ನಾಕಾರ, ರಾಜೇಂದ್ರ ಮಾಡಬೂಳ, ವಿಶ್ವನಾಥ ತೊಟ್ನಳ್ಳಿ, ಎಸ್ ಎಂ ಪಟ್ಟಣಕರ್, ಹೆಚ್ ಎಸ್ ಬರಗಾಲಿ, ಮಂಜುಳಾ ಸುತಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಬಸವರಾಜ್ ಎಸ್ ಜಿಲಿಗೆ ಸನ್ಮಾನ ನಾಳೆ

ಕಲಬುರಗಿ; ಬಸವರಾಜ್ ಎಸ್ ಜಿಲಿ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…

1 hour ago

ಐಆರ್‌ಎಸ್‌ಒ ಕರ್ನಾಟಕ ರಾಜ್ಯ ಕಾರ್ಯಕರ್ತರ ಸಭೆ

ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್‌ಎಸ್‌ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…

1 hour ago

ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…

1 hour ago

ಜನಪದ ಕಲಾವಿದರು ಸಮಾಜದ ಆಸ್ತಿ

ಕಲಬುರಗಿ; ಗ್ರಾಮೀಣ ಭಾಗದಲ್ಲಿ ಅನೇಕ ಜನ ಕಲಾವಿದರು ಹಗಲಿರುಳು ಸೇವೆಗೈದು ಜನಪದ ಉಳಿಸುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ ಎಂದು ನ್ಯಾಯವಾದಿ ಹಣಮಂತರಾಯ…

1 hour ago

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

4 hours ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

5 hours ago