ಕೊಪ್ಪಳ, : ತಾಲೂಕಿನ ಬೇವಿನಹಳ್ಳಿ ಗ್ರಾಮದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯು ರಾಷ್ಟೀಯ ಸುರಕ್ಷತಾ ಮಂಡಳಿಯು ಸುರಕ್ಷತೆಗಾಗಿ ನೀಡುವ “ಉನ್ನತ ಸುರಕ್ಷಾ ಪುರಸ್ಕಾರ ಪ್ರಶಸ್ತಿ” ಗೆ ಭಾಜನವಾಗಿದೆ.
ಬೆಂಗಳೂರಿನ ರ್ಯಾಡಿಸನ್ ಬ್ಲೂ ಏಟ್ರಯಾ ಹೊಟೇಲನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಿ.ಸಿ ಜಗದೀಶ್, ನಿರ್ದೇಶಕರು, ಕಾರ್ಖಾನೆಗಳು, ಬಾಯ್ಲರುಗಳು , ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕರ್ನಾಟಕ ಸರ್ಕಾರ ಬೆಂಗಳೂರು, ಇವರು ಕಿರ್ಲೋಸ್ಕರ್ ಕಾಖಾನೆಯ ಹಿರಿಯ ಉಪಾಧ್ಯಕ್ಷರು-ಮಾನವ ಸಂಪನ್ಮೂಲ ಮತ್ತು ಸಾ.ಆಡಳಿತ ಅಧಿಕಾರಿಯಾದ ಪಿ.ನಾರಾಯಣ ಇವರಿಗೆ “ಉನ್ನತ ಸುರಕ್ಷಾ ಪುರಸ್ಕಾರ” ಪ್ರಶಸ್ತಿ ಪ್ರದಾನ ಮಾಡಿದರು.
ಕಂಪನಿಯ ಕಾರ್ಯಾಚರಣೆ, ಉತ್ಪಾದನಾ ಚಟುವಟಿಕೆಗಳಲ್ಲಿ ಅಪಘಾತಗಳು ಸಂಭವಿಸದಂತೆ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳು, ಕಾರ್ಖಾನೆಯ ಕೆಲಸದ ಸ್ಥಳದಲ್ಲಿ ಉದ್ಯೋಗಿಗಳ ಸುರಕ್ಷತೆ, ಸುರಕ್ಷತಾ ತರಬೇತಿ, ಅಣುಕು ಪ್ರದರ್ಶನ ಮತ್ತು ಅಪಘಾತಗಳ ಅಂಕಿ-ಅಂಶ, ಸುರಕ್ಷತಾ ಸಾಧನ ಸಾಮಾಗ್ರಿಗಳ ಧರಿಸುವಿಕೆ ಇತ್ಯಾದಿಗಳನ್ನು ಗಮನಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ರಾಷ್ಟ್ರೀಯ ಸುರಕ್ಷತಾ ಮಂಡಳಿಯವರು ಕಿರ್ಲೋಸ್ಕರ್ ಕಾರ್ಖಾನೆಯ ಈ ಸಾಧನೆಯನ್ನು ಗುರುತಿಸಿ 2017-2019 ನೇ ಸಾಲಿನ ಉನ್ನತ ಸುರಕ್ಷಾ ಪುರಸ್ಕಾರ ಪ್ರಶಸ್ತಿ ಪ್ರಧಾನ ಮಾಡಿರುತ್ತಾರೆ.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸುರಕ್ಷತಾ ಮಂಡಳಿಯ (ಕರ್ನಾಟಕ ಚಾಪ್ಟರ್) ಅಧ್ಯಕ್ಷತಾದ ಗುಂಡಪ್ಪ ಉಪಾಧ್ಯಕ್ಷರಾದ ಜಿ. ರಾಮಮೂರ್ತಿ, ಗೌರವ ಕಾರ್ಯದರ್ಶಿಗಳಾದ ಪಿ.ಸಿ.ವೆಂಕಟೇಶ್ವರುಲು, ಹರಿಹರದ ಪಿ.ಕೆ ಪ್ರಕಾಶ್ರಾವ್, ಶಿಕ್ಷಣತಜ್ಞರು, ಕಾರ್ಖಾನೆಯ ಹಿರಿಯ ಅಧಿಕಾರಿಗಾದ ಜಿ.ಎಸ್ ಕೃಷ್ಣಮೂರ್ತಿ, ರಾಜೇಶ್ ಬುಟಕಿ, ರವಿಕುಮಾರ್ ಸೇರಿದಂತೆ ಸಮಾರಂಭದಲ್ಲಿ ಕರ್ನಾಟಕದ 125 ವಿವಿಧ ಕಾರ್ಖಾನೆಗಳ ಹಿರಿಯ ಅಧಿಕಾರಿಗಳು, ಮುಖ್ಯಸ್ಥರು ಮತ್ತು ಸುರಕ್ಷತಾ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…