ಕಲಬುರಗಿ; ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಅವರಿಗೆ ಇದೇ ಫೆಬ್ರವರಿ 27ರಂದು ಜರುಗಲಿರುವ ರಾಜ್ಯ ವಿಧಾನಸಭೆಯಿಂದ ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅವಕಾಶ ಕಲ್ಪಿಸಬೇಕೆಂದು ಪಕ್ಷದ ವರಿಷ್ಠರಿಗೆ ಬಿಜೆಪಿ ರೈತ ಮೋರ್ಚ ನಗರ ಜಿಲ್ಲಾ ಉಪಾಧ್ಯಕ್ಷ ಭೀಮಾಶಂಕರ್ ಯಳಮೇಲಿ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮದೇ ಆದ ಶಕ್ತಿ ಹೊಂದಿರುವ ಮಾಲಿಕಯ್ಯ ಗುತ್ತೇದಾರ್ ಅವರು ಅಫಜಲಪುರ ವಿಧಾನಸಭಾ ಮತಕ್ಷೇತ್ರದಿಂದ ಸತತ ಆರು ಬಾರಿ ಶಾಸಕರಾಗಿ, ಗೃಹ ಮಂಡಳಿ ಅಧ್ಯಕ್ಷರಾಗಿ, ಸಚಿವರಾಗಿ ಒಳ್ಳೆಯ ಅಭಿವೃದ್ಧಿ ಕೆಲಸೆಗಳನ್ನು ಮಾಡಿದ್ದಾರೆ. 2018ರಲ್ಲಿ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಕಲ್ಯಾಣ ಕರ್ನಾಟಕ ಭಾಗದ ತುಂಬಾ ಸಂಚರಿಸಿ ಪಕ್ಷ ಸಂಘಟನೆ ಜೊತೆಗೆ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಶ್ರಮ ವಹಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ಡಾ. ಉಮೇಶ್ ಜಾಧವ್ ಅವರಿಗೆ ಬಿಜೆಪಿಗೆ ಕರೆದುಕೊಂಡು ಬಂದು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲು ಕಾರಣಿಕರ್ತರರಾಗಿದ್ದಾರೆ ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಅಭ್ಯರ್ಥಿಯ ಎನ್ನದೇ ಶ್ರಮ ಹಾಕಿ ಗೆಲ್ಲಿಸಿದರು. ಹೀಗಾಗಿ ಅವರನ್ನು ಈ ಹಿಂದೆಯೇ ರಾಜ್ಯ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುತ್ತಾರೆ ಎಂಬ ಸಾಕಷ್ಟು ಆಶಯವಿತ್ತು. ಆ ಸಂದರ್ಭದಲ್ಲಿಯೂ ಸಹ ಅವರಿಗೆ ಕಡೆಗಣಿಸಿರುವುದು ಅಭಿಮಾನಿಗಳಿಗೆ ಸಾಕಷ್ಟು ನೋವು ತಂದಿದೆ ಎಂದು ಅವರು ತೀವ್ರ ಬೇಸರ ಹೊರಹಾಕಿದ್ದಾರೆ.
ಇತ್ತೀಚಿಗೆ ಬಿ.ವೈ. ವಿಜಯೇಂದ್ರ ಅವರು ನೂತನ ರಾಜ್ಯಾಧ್ಯಕ್ಷರಾದ ಬಳಿಕ ನೂತನ ಪದಾಧಿಕರಿಗಳ ಪಟ್ಟಿಯಲ್ಲಿ ಮಾಲಿಕಯ್ಯ ಗುತ್ತೇದಾರ್ ಅವರ ಹೆಸರು ಕೈ ಬಿಟ್ಟಿರುವುದು ಸರಿಯಲ್ಲ. ಬಿಜೆಪಿ ಹಿರಿಯ ಮುತ್ಸದ್ದಿ ನಾಯಕ ಮಾಲಿಕಯ್ಯ ಗುತ್ತೇದಾರ್ ಅವರಿಗೆ ಈ ಬಾರಿ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯ ಸಭಾ ಸದಸ್ಯರನ್ನಾಗಿ ಮಾಡುವ ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬಿಸಬೇಕು. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬಲು ಮಾಲಿಕಯ್ಯ ಗುತ್ತೇದಾರ್ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮನವಿ ಮೂಲಕ ಆಗ್ರಹಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…