ಸಂವಿಧಾನ ಶಿಲ್ಪಿಗೆ ಹಾಲಿನ‌ ಅಭಿಷೇಕ: ಕುಂಚಾವರಂನಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಭವ್ಯ ಸ್ವಾಗತ

ಕಲಬುರಗಿ: ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂವಿಧಾನ ಕುರಿತು ಅರಿವು ಮೂಡಿಸಲು ಸಂಚರಿಸುತ್ತಿರುವ ಜಾಗೃತಿ ಜಾಥಾಕ್ಕೆ ಸೋಮವಾರ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ಜಾಥಾ ಅಂಗವಾಗಿ ಅಂಬೇಡ್ಕರ ಪ್ರತಿಮೆಗೆ ಗ್ರಾಮಸ್ಥರು ಹಾಲಿನ‌ ಅಭಿಷೇಕ ಮಾಡಿ ಸಂವಿಧಾನ ಪಿತಾಮಹನಿಗೆ ಗೌರವ ಸಲ್ಲಿಸಿದರು.

ಗ್ರಾಮಕ್ಕೆ ಅಗಮಿಸಿದ ಜಾಥಾಕ್ಕೆ ಗ್ರಾಮ‌ ಪಂಚಾಯತಿ ಅಧ್ಯಕ್ಷೆ ರೇಣುಕಾ ರಾಜು ರಾಠೋಡ ನೇತೃತ್ವದಲ್ಲಿ ಲಂಬಾಣಿ ಮಹಿಳೆಯರು ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿ ಗಮನ ಸೆಳೆದರು. ಯುವಕರು ಬೈಕ್ ರ‌್ಯಾಲಿ ಆಯೋಜಿಸಿದ್ದರು. ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಮಹತ್ವ ತಿಳಿಸಲಾಯಿತು. ನಂತರ‌ ನಡೆದ‌ ವೇದಿಕೆ ಕಾರ್ಯಕ್ರಮದಲ್ಲಿ 4ನೇ ತರಗತಿ ವಿದ್ಯಾರ್ಥಿನಿ ಭವಾನಿ ಆಂಗ್ಲದಲ್ಲಿ ಸಂವಿಧಾನ ಪೀಠಿಕೆ ವಾಚನ ಮಾಡಿ ಗಮನ ಸೆಳೆದರು.

ತಾಲೂಕಿನ ಐನೊಳ್ಳಿ ಗ್ರಾಮದಲ್ಲಿ ಸಹ ಜಾಗೃತಿ ಜಾಥಾ ಅಗಮಿಸುತ್ತಿದಂತೆ ಗ್ರಾಮಸ್ಥರು ಜೆ.ಸಿ.ಬಿ. ಮೂಲಕ ಪುಷ್ಪ ಮಳೆ ಸುರಿಸಿ ಸಂಭ್ರಮಪಟ್ಟರು. ಶಾಲಾ ಮಕ್ಕಳ ಲೇಜಿಮ್ ನೃತ್ಯ, ಮಾನವ ಸರಪಳಿ ನಿರ್ಮಾಣ, ಬೈಕ್ ರ‌್ಯಾಲಿ ಇಲ್ಲಿಯೂ ನಡೆಯಿತು. ಒಟ್ಟಾರೆಯಾಗಿ ಸಂವಿಧಾನದ ಮೂಲ ಅಶಯ, ಹಕ್ಕು ಮತ್ತು ಕರ್ತವ್ಯದ ಕುರಿತು ಸಾರ್ವಜನಿಕರಿಗೆ ಬೋಧಿಸಲಾಯಿತು. ಇದಕ್ಕು ಮುನ್ನ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿಯು ಜಾಗೃತಿ ಜಾಥಾ ಸಂಚರಿಸಿತ್ತು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಲಿಂಗ ವಾಲಿ, ಬಿ.ಇ.ಓ ನಾಗಶೆಟ್ಟಿ ಭದ್ರಶೆಟ್ಟಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಯಪ್ಪ, ವಲಯ ಅರಣ್ಯಾಧಿಕಾರಿ ಶಾಂತರೆಡ್ಡಿ, ಪಿ.ಡಿ.ಓ ದಶರಥ ಪಾತ್ರೆ ಸೇರಿದಂತೆ ಅನೇಕ ಅಧಿಕಾರಿಗಳು ಇದ್ದರು.

ಮಾಶಾಳದಲ್ಲಿ ಸೈಕಲ್ ಜಾಥಾ: ಅಫಜಲಪೂರ ತಾಲೂಕಿನ ಎರಡನೇ ದಿನದ ಜಾಗೃತಿ ಜಾಥಾ ಮುಂದುವರೆದಿದ್ದು, ಸೋಮವಾರ ಮಾಶಾಳ ಗ್ರಾಮದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಅತ್ತ ತಾಲೂಕಿನ ರಾಮನಗರ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಅಂಬೇಡ್ಕರ ಜೀವನ‌ ಚರಿತ್ರೆ ಕುರಿತು ಶಾಲಾ ಮಕ್ಕಳು ನಾಟಕ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಕರಜಗಿಯಲ್ಲಿ ತಡರಾತ್ರಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಹಿಳೆಯರು ಸೇರಿ ಜನಜಂಗುಳಿಯೇ ಇತ್ತು.

ಇದೇ‌ ಸಂದರ್ಭದಲ್ಲಿ ಸಂವಿಧಾನ ಕುರಿತು ರಸಪ್ರಶ್ನೆ, ಪ್ರಬಂಧ, ಭಾಷಣ ಸ್ಪರ್ಧೆ ವಿಭಾಗದಲ್ಲಿ ವಿಜೇತರಾದ ಮಕ್ಕಳಿಗೆ ಸಂವಿಧಾನ ಪೀಠಿಕೆ, ಸಂವಿಧಾನ ಓದು ಪುಸ್ತಕ ಹಾಗೂ ಮೂಲಭೂತ ಕರ್ತವ್ಯಗಳ ಪುಸ್ತಕ ವಿತರಣೆ ಮಾಡಲಾಯಿತು. ಸಂವಿಧಾನ ಪೀಠಿಕೆ ಬೋಧಿಸಲಾಯಿತು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 min ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420