ವಿಧಾನ ಸಬೆ ಕಲಾಪದಲ್ಲಿ ಗಮನ ಸೆಳೆದ ಶಾಸಕ ಅಲ್ಲಂಪ್ರಭು ಪಾಟೀಲ್

0
33

 

ಕಲಬುರಗಿ: ಜಿಲ್ಲೆಯಲ್ಲಿ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆಯಿಂದ ಉದ್ಭವವಾಗಬಹುದಾದ ಅನೇಕ ತೊಂದರೆಗಳನ್ನು ಪರಿಹರಿಸಲು, ನಿಭಾಯಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಬರ ನಿರ್ವಹಣ ಸಮೀತಿಯು ಜಿಲ್ಲೆಯ 11 ತಾಲೂಕುಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ 282 ಗ್ರಾಮಗಳನ್ನ ಗುರುತಿಸಿದೆ, ಈ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಮೇಲೆ ನಿಗಾ ಇಟ್ಟಿದೆ ಎಂದು ಆರ್‌ಡಿಪಿಆರ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

Contact Your\'s Advertisement; 9902492681

ವಿಧಾನ ಸಭೆಯಲ್ಲಿಂದು ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಂಪ್ರಭು ಪಾಟೀಲರ ಗಮನ ಸೆಳೆಯುವ ಗೊತ್ತುವಳಿಗೆ ಉತ್ತರಿಸಿದ ಅವರು, ಸಮಸ್ಯೆ ಎದುರಾಗಬಹುದಾದ 282 ಗಾಮಗಳ ಪೈಕಿ 157 ಗ್ರಾಮಗಳಲ್ಲಿ ಅದಾಗಲೇ ಖಾಸಗಿಯವರ ಕೊಳವೆ ಬಾವಿಗಳನ್ನೂ ಗುರುತಿಸಲಾಗಿದೆ. 185 ಗ್ರಾಮಗಳಲ್ಲಿ ಅಗತ್ಯ ಬಿದ್ದರೆ ಟ್ಯಾಂಕರ್‌ ಮೂಲಕ ನೀರು ಸರಬರಾಜಿಗೂ ಸಿದಧತೆ ಮಾಡಿಟ್ಟುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕಲಬುರಗಿ ಜಿಲ್ಲಾದ್ಯಂತ ಕಂಡಿರುವ ಬರಗಾಲ ನಿರ್ವಹಣೆಗೆ ತುರ್ತು ಬರ ಕಾಮಗಾರಿ ರೂಪದಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. 193 ಕಾಮಗಾರಿಗಳನ್ನು ಅಳ‍ಡಿಸಿಕೊಳ್ಳಲಾಗಿದೆ. ಅದರಲ್ಲಿ 164 ಕೊಳವೆ ಬಾವಿ ಕೊರೆಯಿಸುವುದು, ಸ್ವಚ್ಚಗೊಳಿಸುವುದು, ಅಣಿಗೊಳಿಸುವುದು ಹಾಗೂ ಪೈಪ್‌ಲೈನ್‌ ಮತ್ತು ಮೋಟರ್‌ ಅಳವಡಿಸುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಸದನದಲ್ಲಿ ಶಾಸಕರಾದ ಅಲ್ಲಂಪ್ರಭು ಪಾಟೀಲರ ಗಮನ ಸೆಳೆಯುವ ಗೊತ್ತುವಳಿಗೆ ಉತ್ತರಿಸುತ್ತ ಮಾಹಿತಿ ನೀಡಿದ್ದಾರೆ.

ಇಂದು ಸದನದಲ್ಲಿ ತಮ್ಮ ಗಮನ ಸೆಳೆಯುವ ಗೊತ್ತುವಳಿ ಮೇಲೆ ಮಾತನಾಡಿದ ಕಲಬುರಗಿ ಶಾಸಕ ಅಲ್ಲಂಪ್ರಭು ಪಾಟೀಲರು, ಕಲಬುರಗಿ ಜಿಲ್ಲೆಯಲ್ಲಿ ಭೀಮಾ, ಅಮರ್ಜಾ ಸೇರಿದಂತೆ ನದಿಗಳೆಲ್ಲವೂ ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿದಿದೆ. ಕೆರೆಗಳಲ್ಲಿ ನೀರಿಲ್ಲ, ಜನ- ಜಾನುವರು ಹಾಹಾಕಾರ ಬರುವ ದಿನಗಳಲ್ಲಿ ಹೆಚ್ಚಾಗುವ ಆತಂಕವನ್ನು ಹೊರಹಾಕಿದರಲ್ಲದೆ ಭೀಮಾ ನದಿಗೆ ಕೃಷ್ಣಾ ನದಿಯಿಂದ ಹೆಚ್ಚುವರಿ ನೀರು ಹರಿಸುವ ಮೂಲಕ ನದಿಯಲ್ಲಿ ನೀರು ಇರುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು.

ಕಲಬುರಗಿ ನಗರದಲ್ಲಿನ ಬಹುಕೋಟಿ ಮೊತ್ತದ ನಿರಂತರ ನೀರು ಪೂರೈಕೆ ಯೋಜನೆ ವಿಳಂಬವಾಗುತ್ತಿರೋದರ ಬಗ್ಗೆಯೂ ಶಾಸಕರು ಸದನದಲ್ಲಿ ಗಮನ ಸೆಳೆಯುತ್ತ ಬೇಗನೇ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here