ಕಲಬುರಗಿ: ಜಿಲ್ಲೆಯಲ್ಲಿ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆಯಿಂದ ಉದ್ಭವವಾಗಬಹುದಾದ ಅನೇಕ ತೊಂದರೆಗಳನ್ನು ಪರಿಹರಿಸಲು, ನಿಭಾಯಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಬರ ನಿರ್ವಹಣ ಸಮೀತಿಯು ಜಿಲ್ಲೆಯ 11 ತಾಲೂಕುಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ 282 ಗ್ರಾಮಗಳನ್ನ ಗುರುತಿಸಿದೆ, ಈ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಮೇಲೆ ನಿಗಾ ಇಟ್ಟಿದೆ ಎಂದು ಆರ್ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ವಿಧಾನ ಸಭೆಯಲ್ಲಿಂದು ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಂಪ್ರಭು ಪಾಟೀಲರ ಗಮನ ಸೆಳೆಯುವ ಗೊತ್ತುವಳಿಗೆ ಉತ್ತರಿಸಿದ ಅವರು, ಸಮಸ್ಯೆ ಎದುರಾಗಬಹುದಾದ 282 ಗಾಮಗಳ ಪೈಕಿ 157 ಗ್ರಾಮಗಳಲ್ಲಿ ಅದಾಗಲೇ ಖಾಸಗಿಯವರ ಕೊಳವೆ ಬಾವಿಗಳನ್ನೂ ಗುರುತಿಸಲಾಗಿದೆ. 185 ಗ್ರಾಮಗಳಲ್ಲಿ ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕ ನೀರು ಸರಬರಾಜಿಗೂ ಸಿದಧತೆ ಮಾಡಿಟ್ಟುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕಲಬುರಗಿ ಜಿಲ್ಲಾದ್ಯಂತ ಕಂಡಿರುವ ಬರಗಾಲ ನಿರ್ವಹಣೆಗೆ ತುರ್ತು ಬರ ಕಾಮಗಾರಿ ರೂಪದಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. 193 ಕಾಮಗಾರಿಗಳನ್ನು ಅಳಡಿಸಿಕೊಳ್ಳಲಾಗಿದೆ. ಅದರಲ್ಲಿ 164 ಕೊಳವೆ ಬಾವಿ ಕೊರೆಯಿಸುವುದು, ಸ್ವಚ್ಚಗೊಳಿಸುವುದು, ಅಣಿಗೊಳಿಸುವುದು ಹಾಗೂ ಪೈಪ್ಲೈನ್ ಮತ್ತು ಮೋಟರ್ ಅಳವಡಿಸುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಸದನದಲ್ಲಿ ಶಾಸಕರಾದ ಅಲ್ಲಂಪ್ರಭು ಪಾಟೀಲರ ಗಮನ ಸೆಳೆಯುವ ಗೊತ್ತುವಳಿಗೆ ಉತ್ತರಿಸುತ್ತ ಮಾಹಿತಿ ನೀಡಿದ್ದಾರೆ.
ಇಂದು ಸದನದಲ್ಲಿ ತಮ್ಮ ಗಮನ ಸೆಳೆಯುವ ಗೊತ್ತುವಳಿ ಮೇಲೆ ಮಾತನಾಡಿದ ಕಲಬುರಗಿ ಶಾಸಕ ಅಲ್ಲಂಪ್ರಭು ಪಾಟೀಲರು, ಕಲಬುರಗಿ ಜಿಲ್ಲೆಯಲ್ಲಿ ಭೀಮಾ, ಅಮರ್ಜಾ ಸೇರಿದಂತೆ ನದಿಗಳೆಲ್ಲವೂ ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿದಿದೆ. ಕೆರೆಗಳಲ್ಲಿ ನೀರಿಲ್ಲ, ಜನ- ಜಾನುವರು ಹಾಹಾಕಾರ ಬರುವ ದಿನಗಳಲ್ಲಿ ಹೆಚ್ಚಾಗುವ ಆತಂಕವನ್ನು ಹೊರಹಾಕಿದರಲ್ಲದೆ ಭೀಮಾ ನದಿಗೆ ಕೃಷ್ಣಾ ನದಿಯಿಂದ ಹೆಚ್ಚುವರಿ ನೀರು ಹರಿಸುವ ಮೂಲಕ ನದಿಯಲ್ಲಿ ನೀರು ಇರುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು.
ಕಲಬುರಗಿ ನಗರದಲ್ಲಿನ ಬಹುಕೋಟಿ ಮೊತ್ತದ ನಿರಂತರ ನೀರು ಪೂರೈಕೆ ಯೋಜನೆ ವಿಳಂಬವಾಗುತ್ತಿರೋದರ ಬಗ್ಗೆಯೂ ಶಾಸಕರು ಸದನದಲ್ಲಿ ಗಮನ ಸೆಳೆಯುತ್ತ ಬೇಗನೇ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…