ಕಲಬುರಗಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಗರದ ಎಸ್ ವಿ ಪಿ ವೃತ್ತದಲ್ಲಿ ಸಿ ಆರ್ ಪಿ ಎಫ್ ಯೋಧರ ಸಂಘದ ನೇತೃತ್ವದಲ್ಲಿ ಕ್ಯಾಂಡಲ್ ಬೆಳಗಿ, ಮೌನಾಚರಣೆ ಮಾಡುವ ಮೂಲಕ ಅಗಲಿದ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಯೋಧರ ಸಂಘದ ಪದಾಧಿಕಾರಿಗಳು ಹಾಗೂ ಕಲ್ಯಾಣ ಕರ್ನಾಟಕ ಲೋಕೋಪಯೋಗಿ ನೌಕರ ಸಂಘ ಸದಸ್ಯರು ಉಪಸ್ಥಿತರಿದ್ದರು.