ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಗುರಿ ತಲುಪಿ

ಶಹಾಬಾದ: ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ಸೋಮಾರಿಗಳಾಗದೆ,ಕಠಿಣ ಪರಿಶ್ರಮದಿಂದ ಉತ್ತಮ ವಿದ್ಯಾಭ್ಯಾಸ ಮಾಡಿ ತಮ್ಮ ಗುರಿ ತಲುಪಬೇಕು ಎಂದು ನಗರದ ಎಸ್‍ಬಿಐ ಬ್ಯಾಂಕ್ ವ್ಯವಸ್ಥಾಪಕ ಸುಭಾಷಚಂದ್ರ ಹಿಟ್ಟನ್‍ಹಳ್ಳಿ ಹೇಳಿದರು.

ಅವರು ನಗರದ ಸಿಎ ಇಂಗಿನಶೆಟ್ಟಿ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ವಾಣಿಜ್ಯ ಶಾಸ್ತ್ರದಲ್ಲಿ ಓದಿದವರಿಗೆ ಬ್ಯಾಂಕಿಂಗ್ ಕ್ಷೇತ್ರ, ಐಟಿ ಬಿಟಿ, ವಾಣಿಜ್ಯ ತೆರಿಗೆ ವಿಭಾಗ, ಲೆಕ್ಕಪರಿಶೋಧನಾ ವಿಭಾಗ ಮತ್ತಿತರರ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳಿವೆ. ಆದ್ದರಿಂದ ಬಿ.ಕಾಂ.ಪದವಿ ಪಡೆದವರು ಪದವಿ ಹಂತದಲ್ಲಿ ಇಂಗ್ಲಿμï ಜ್ಞಾನವನ್ನು ಪಡೆದುಕೊಂಡರೆ ಉದ್ಯೋಗಕ್ಕೆ ಸೇರಲು ಸುಲಭವಾಗುತ್ತದೆ.

ವಾಣಿಜ್ಯ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರು ವಿಶ್ವದ ಯಾವುದೇ ಭಾಗದಲ್ಲಿ ಕೆಲಸವನ್ನು ಸುಲಭವಾಗಿ ಗಿಟ್ಟಿಸಬಹುದಾಗಿದೆ. ಆದರೂ ಸ್ಪರ್ಧಾತ್ಮಕ ಯುಗವಾಗಿರುವುದರಿಂದ ಉತ್ತಮ ದರ್ಜೆಯಲ್ಲಿ ಉತ್ತೀರ್ಣ ಹೊಂದಲು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು ಎಂದರು.ಅಲ್ಲದೇ ಸಿಎ ಇಂಗಿನಶೆಟ್ಟಿ ಕಾಲೇಜಿನ ವಿದ್ಯಾರ್ಥಿಗಳು ಸಿಎಗಳಾಗುವ ಮೂಲಕ ಓದಿದ ಶಾಲಾ-ಕಾಲೇಜಿಗೆ, ಪೆÇೀಷಕರಿಗೆ ಹಾಗೂ ಪಾಠ ಹೇಳಿದ ಗುರುಗಳಿಗೆ ಕೀರ್ತಿ ತರಬೇಕು ಎಂದು ಹೇಳಿದರು.

ಉಪನ್ಯಾಸಕ ಪ್ರವೀಣ ರಾಜನ್ ಮಾತನಾಡಿ, ಪ್ರಪಂಚದಲ್ಲಿ ವಾಣಿಜ್ಯಶಾಸ್ತ್ರ ಪದವಿಯು ಹೆಚ್ಚು ಬೇಡಿಕೆಯನ್ನು ಹೊಂದಿದ ಪದವಿಯಾಗಿದೆ. ವಾಣಿಜ್ಯ ಶಾಸ್ತ್ರದಲ್ಲಿ ಶಿಕ್ಷಣ ಪಡೆದರೆ ಹೆಚ್ಚು ಉದ್ಯೋಗಾವ ಕಾಶಗಳು ವಿಶ್ವದ ಯಾವುದೇ ಭಾಗದಲ್ಲಿ ಸುಲಭವಾಗಿ ದೊರೆಯು ತ್ತವೆ. ಹಾಗಾಗಿ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡುವ ಮೂಲಕ ಉತ್ತಮ ದರ್ಜೆಯಲ್ಲಿ ಉತ್ತೀರ್ಣ ಹೊಂದಿ ತಮ್ಮ ಗುರಿ ತಲುಪಬೇಕು ಎಂದು ಸಲಹೆ ನೀಡಿದರು.

ಉಪನ್ಯಾಸಕ ಶರಣು ಹಲಕರ್ಟಿ, ಶಿಕ್ಷಕ ಬಾಬಾಸಾಹೇಬ ಸಾಳುಂಕೆ ಮಾತನಾಡಿದರು.ರಾಷ್ಟ್ರ ಭಾಷಾ ಶಿಕ್ಷಣ ಸಮಿತಿಯ ಅಧ್ಯಕ್ಷ ಬಾಲಕಿಶನ್ ವರ್ಮಾ, ಕಾರ್ಯದರ್ಶಿ ದಿಲೀಪ್ ಯಲಶೆಟ್ಟಿ, ಪ್ರಭಾರಿ ಪ್ರಾಂಶುಪಾಲ ರಮೇಶ ವಾಲಿ ವೇದಿಕೆಯ ಮೇಲಿದ್ದರು.

ಉಪನ್ಯಾಸಕರಾದ ದೀಪಾ.ಡೇವಿಡ್, ಅಶ್ವಿನಿ ಮೋಹಿತೆÉ ಶ್ವೇತಾ ಪವಾರ,ಸಾಬಣ್ಣ ಗುಡ್ಲಾ, ಪದ್ಮಶ್ರೀ ಜೋಷಿ, ಸುಗಯ್ಯ ಮಠ, ವೀರಯ್ಯ ಹಿರೇಮಠ, ರಮೇಶ ಮಹೀಂದ್ರಕರ್ ಸೇರಿದಂತೆ ಇತರರು ಇದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420