ಶಹಾಬಾದ: ನಗರದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ.ಇದಕ್ಕೆ ಉದಾಹರಣೆ ಎಂಬಂತೆ ನಗರದ ಹಳೆಶಹಾಬಾದನಲ್ಲಿ ಮಹಿಳೆಯ ಮೇಲೆ ನಾಯಿಗಳ ಗುಂಪು ಕೈ ಹಾಗೂ ಕಾಲುಗಳಿಗೆ ಕಚ್ಚಿ ಗಂಭೀರ ಗಾಯಗೊಳಿಸದಂತಹ ಘಟನೆ ನಡೆದಿದೆ.

ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಎಲ್ಲೆಂದರಲ್ಲಿ ಓಡಾಡುತ್ತಿರುವ ಬೀದಿನಾಯಿಗಳ ಕಾಟದಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ಹರಸಾಹಸ ಪಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರಸಭೆ ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದವರಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಿಗ್ಗೆ ಶಾಲೆಗಳು ತೆರೆಯುವ ಹಾಗೂ ಸಂಜೆ ಬಿಡುವ ವೇಳೆಯಲ್ಲಿ ಶಾಲಾ ಮಕ್ಕಳು ಆತಂಕದಿಂದ ಓಡಾಡುವಂತಾಗಿದೆ. ನಗರಸಭೆ ಆರೋಗ್ಯ ನಿರೀಕ್ಷಕರು ಕೇವಲ ನಗರದ ಸ್ವಚ್ಛತೆ ಜತೆಗೆ ನಗರದಲ್ಲಿ ನಿತ್ಯ ಎಗ್ಗಿಲ್ಲದೇ ಓಡಾಡುತ್ತಿರುವ ಬೀಡಾಡಿ ಹಸುಗಳು ಹಾಗೂ ಬೀದಿ ನಾಯಿಗಳ ಹಾವಳಿ ತಡೆಯುವಲ್ಲಿ ವಿಫಲರಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ.

ಹಿಡಿಶಾಪ: ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ನಗರಸಭೆಗೆ ಸ್ಥಳೀಯರು ಅನೇಕ ಬಾರಿ ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನಿಕರು ನಗರಸಭೆಯ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದಾರೆ. ಪಟ್ಟಣದ ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ರಸ್ತೆ, ಶಾಸ್ತ್ರಿ ವೃತ್ತ, ನೆಹರು ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಅನೇಕ ವೃತ್ತಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸಂತಾನ ತಡೆ ಚಿಕಿತ್ಸೆ ಮಾಡಬಹುದು.

ಆದರೆ, ಈ ಕಾರ್ಯಕ್ಕೆ ನಗರಸಭೆ ಮುಂದಾಗುತ್ತಿಲ್ಲ. ಆದ್ದರಿಂದ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಬೀದಿ ನಾಯಿಗಳ ಉಪಟಳಕ್ಕೆ ಜನ ಕಂಗಾಲಾಗಿದ್ದಾರೆ. ಶಾಲೆಗೆ ಬರುವ ಚಿಕ್ಕ ಮಕ್ಕಳ ಮೇಲೆ ಎರಗಿದರೇ ಹೇಗೆ ಎಂಬ ಆತಂಕ ಪೋಷಕರಲ್ಲಿ ಮನೆ ಮಾಡಿದೆ.ಕೂಡಲೇ ಬೀದಿ ನಾಯಿಗಳನ್ನು ನಿಯಂತ್ರಣ ಮಾಡಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ.

ನಗರದ ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ – ಅನ್ವರ್ ಪಾಶಾ, ನಾಗಣ್ಣ ರಾಂಪೂರೆ, ಶರಣಗೌಡ ಪಾಟೀಲ ಸ್ಥಳೀಯ ನಿವಾಸಿಗಳು.

ಬೆಳಿಗ್ಗೆ ಶಾಲೆಗೆ ಹೋಗುವ ಸಂದರ್ಭದಲ್ಲಿ ನಾಯಿಗಳ ಗುಂಪೊಂದು ಮಹಿಳೆಯ ಕೈ ಹಾಗೂ ಕಾಲುಗಳಿಗೆ ಕಚ್ಚಿ ಗಂಭೀರ ಗಾಯಗೊಳಿಸದಂತಹ ಘಟನೆ ಬುಧವಾರ ನಗರದ ಹಳೆಶಹಾಬಾದನಲ್ಲಿ ನಡೆದಿದೆ.

ಹಳೆಶಹಾಬಾದ ನಿವಾಸಿ ಅಫ್‍ಸರ್ ಬೇಗಂ ಹಳೆಶಹಾಬಾದನ ಉರ್ದು ಶಾಲೆಯಲ್ಲಿ ಅಡುಗೆ ಸಹಾಯಕಿ.ಈಕೆ ಎಂದಿನಂತೆ ಬೆಳಿಗ್ಗೆ ಶಾಲೆಗೆ ಸಮೀಪ ಬಂದಾಗ ಆರೇಳು ನಾಯಿಗಳು ಗುಂಪು ಒಮ್ಮೆಲೆ ದಾಳಿ ನಡೆಸಿ, ಕೈ ಕಾಲುಗಳಿಗೆ ಕಚ್ಚಿ ಗಂಭೀರ ಗಾಯಗೊಳಿಸಿವೆ. ನಾಯಿಗಳ ಕಡಿತಕ್ಕೆ ಮಹಿಳೆ ಚೀರಾಡಿ, ಅಲ್ಲಿಂಗ ಓಡಿ ಹೋದರೂ, ನಾಯಿಗಳು ಅಟ್ಟಾಡಿಸಿ ಕಚ್ಚಿ ಘಾಸಿಗೊಳಿಸಿವೆ.ತಕ್ಷಣವೇ ಸಮೀಪದಲ್ಲಿದ್ದ ಜನರು ಓಡಿ ಬಂದು ನಾಯಿಗಳನ್ನು ಓಡಿಸಿದ್ದಾರೆ.ಅದೃಷ್ಟವಶ ನಾಯಿಗಳಿಂದ ಮಹಿಳೆ ಪಾರಾಗಿದ್ದಾಳೆ.ಮಹೀಲೆಯನ್ನು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ಕಳಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420