ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಸರಸ್ವತಿ ಪೂಜೆಯಲ್ಲಿ ಕುಲಪತಿ ಭಾಗಿ: ಆಕ್ಷೇಪಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ

0
18

ಕಲಬುರಗಿ: ಜಿಲ್ಲೆಯ ಆಳಂದ್ ತಾಲ್ಲೂಕಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಆಡಳಿತ ಸೌಧ ಹಾಗೂ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಸರಸ್ವತಿ ಪೂಜೆಗೆ ಸಂಶೋಧನಾ ವಿಭಾಗದ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದು, ಅಂತಹ ವಿದ್ಯಾರ್ಥಿಗಳಿಗೆ ಬೆದರಿಕೆಯ ಕರೆಗಳು ಬರುತ್ತಿರುವ ಕುರಿತು ಸಂಶೋಧನಾ ವಿದ್ಯಾರ್ಥಿಯೊಬ್ಬರು ಕಳವಳ ವ್ಯಕ್ತಪಡಿಸಿದ್ದಾರೆ.

ಕೇಂದ್ರೀಯ ವಿಶ್ವವಿದ್ಯಾಲಯದ ಆಡಳಿತ ಸೌಧ ಹಾಗೂ ಗ್ರಂಥಾಲಯದಲ್ಲಿ ಬುಧವಾರ ಕೆಲವು ಶಿಕ್ಷಕರು ಮತ್ತು ಗ್ರಂಥಾಲಯದ ಮುಖ್ಯ ಅಧಿಕಾರಿಗಳ ಸಮ್ಮುಖದಲ್ಲಿ ವಸಂತ ಪಂಚಮಿ ನಿಮಿತ್ಯ ವಿಶ್ವವಿದ್ಯಾಲಯದಲ್ಲಿ ಚೌಟ್ರಿ ಹಾಕಿ ಸರಸ್ವತಿ ಪೂಜೆ ಮಾಡಲಾಗಿದೆ. ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ್ ಅವರೂ ಸಹ ಪಾಲ್ಗೊಂಡಿದ್ದರು. ಗ್ರಂಥಾಲಯದಲ್ಲಿ ಧಾರ್ಮಿಕ ಚಟುವಟಿಕೆ ಹಮ್ಮಿಕೊಂಡಿರುವುದಕ್ಕೆ ಸಂಶೋಧನಾ ವಿಭಾಗದ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ವಿಶ್ವವಿದ್ಯಾಲಯದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಹೂವಿನ ಹಾರ ಹಾಕಲು ಅಡ್ಡಿಪಡಿಸುವ ಸಿಬ್ಬಂದಿಗಳು ಸಾರ್ವಜನಿಕ ಪ್ರದೇಶದಲ್ಲಿ ಧಾರ್ಮಿಕ ಆಚರಣೆ ಮಾಡುತ್ತಿರುವುದನ್ನು ಖಂಡಿಸಿದರು. ಗ್ರಂಥಾಲಯವನ್ನು ದೇವಸ್ಥಾನ ಮಾಡುತ್ತೀರಾ ಎಂದು ವಿಶ್ವವಿದ್ಯಾಲಯದ ಮುಖ್ಯ ಗ್ರಂಥಪಾಲಕರಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

ವಿದ್ಯಾರ್ಥಿಗಳಲ್ಲಿ ಮೂಢನಂಬಿಕೆಯ ಆಚರಣೆಗಳಿಗೆ ಪ್ರೋತ್ಸಾಹ ನೀಡುವ ಆಚರಣೆಗೆ ಅವಕಾಶ ಕಲ್ಪಿಸುವ ಮೂಲಕ ಗ್ರಂಥಾಲಯಗಳನ್ನು ಧಾರ್ಮಿಕ ಕೇಂದ್ರವನ್ನಾಗಿಸುತ್ತಿದೆ ಎಂದು ಕೆಲ ಸಂಶೋಧನಾ ವಿದ್ಯಾರ್ಥಿಗಳು ಆರೋಪಿಸಿದರು.

ಈ ನಡುವೆ ಸರಸ್ವತಿ ಪೂಜೆಗೆ ಅಡ್ಡಿಪಡಿಸಿರುವ ವಿದ್ಯಾರ್ಥಿಗಳಿಗೆ ಹಿಂದೂ ವಿರೋಧಿ ಎಂದು ರಾತ್ರಿಯಿಡೀ ಬೆದರಿಕೆ ಕರೆಗಳು ಮತ್ತು ಅವಾಚ್ಯವಾಗಿ ನಿಂದಿಸುವ ಕರೆಗಳು ಬರುತ್ತಿವೆ ಎಂದು ಸಂಶೋಧನಾ ವಿದ್ಯಾರ್ಥಿಯೊಬ್ಬರು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here