ಕಲಬುರಗಿ: ಕಡಕೋಳದಲ್ಲಿಯೇ ‘ತತ್ವಪದಕಾರ ಶ್ರೀ ಕಡಕೋಳ ಮಡಿವಾಳೇಶ್ವರರ ಅಧ್ಯಯನ ಸಂಶೋಧನಾ ಕೇಂದ್ರ’ವನ್ನು ಸರಕಾರ ಸ್ಥಾಪನೆ ಮಾಡಬೇಕು ಎಂದು ಶ್ರೀ ಕಡಕೋಳ ಮಡಿವಾಳೇಶ್ವರ ಮಹಾಮಠದ ಪೀಠಾಧಿಪತಿ ಡಾ.ರುದ್ರಮುನಿ ಶಿವಾಚಾರ್ಯರರು ಆಗ್ರಹಿಸಿದ್ದಾರೆ.
ರಾಜ್ಯ ಸರಕಾರ ಮಂಡಿಸಿದ 15ನೇ ಬಜೆಟ್ನಲ್ಲಿ ಘೋಷಿಸಲಾದ ‘ತತ್ವಪದಕಾರರು ಮತ್ತು ಸೂಫಿಗಳ ಬದುಕು ಮತ್ತು ಸಂದೇಶಗಳ’ ಅಧ್ಯಯನ ಕೈಗೊಳ್ಳಲು ಕಲಬುರಗಿ ವಿವಿಯಲ್ಲಿ ಪೀಠಗಳ ಸ್ಥಾಪನೆಗೆ ಮುಂದಾಗಿರುವುದು ಸೂಕ್ತವೆನಿಸುತ್ತಿಲ್ಲ. ಕಲ್ಯಾಣ ಕರ್ನಾಟಕದ ತತ್ವಪದ ಸಾಹಿತ್ಯ ಕ್ಷೇತ್ರದಲ್ಲಿ ಶ್ರೀ ಕಡಕೋಳ ಮಡಿವಾಳೇಶ್ವರರು ಅಗ್ರಗಣ್ಯರು. ಆದರೆ ಸಾಮೂಹಿಕವಾಗಿ ತತ್ವಪದಕಾರರಲ್ಲಿ ಕಡಕೋಳ ಮಡಿವಾಳಪ್ಪರನ್ನು ಸೇರಿಸಿ ಪೀಠ ಸ್ಥಾಪನೆಗೆ ಮುಂದಾಗಿರುವುದು ಕಡಕೋಳ ಮಡಿವಾಳಪ್ಪನಿಗೆ ಮಾಡಿದ ಮಹಾ ಅಪಮಾನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಈ ಭಾಗದ ಸಚಿವರು, ಶಾಸಕರು ಕಲ್ಯಾಣ ಕರ್ನಾಟಕದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕಡಕೋಳ ಗ್ರಾಮದಲ್ಲಿ ‘ತತ್ವಪದಕಾರ ಶ್ರೀ ಕಡಕೋಳ ಮಡಿವಾಳೇಶ್ವರರ ಅಧ್ಯಯನ ಸಂಶೋಧನಾ ಕೇಂದ್ರ’ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶ್ರೀಗಳು, ಅನುಯಾಯಿಗಳು ಮತ್ತು ಭಕ್ತರು ಒತ್ತಾಯಿಸಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…